23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

ಬಂಗಾಡಿ: ಬಂಗಾಡಿ ಜೈನ ಬಸದಿ ಎದುರು ಜೂ.25 ರಂದು ಅತಿಯಾದ ಮಳೆಯಿಂದಾಗಿ ಚರಂಡಿ ನಿರ್ವಹಣೆ ಇಲ್ಲದೆ ರಸ್ತೆಯಲ್ಲೇ ಮಳೆಯ ನೀರು ಹರಿದಿದೆ ಎಂದು ಸುದ್ದಿ ಉದಯ ವೆಬ್ ಸೈಟ್ ನಲ್ಲಿ ವರದಿ ಪ್ರಕಟಗೊಂಡಿತು. ಈ ಬಗ್ಗೆ ಎಚ್ಚೆತ್ತ ಬಂಗಾಡಿ ವ್ಯವಸಾಯಕ ಸಹಕಾರಿ ಸಂಘ ಹಾಗೂ ಬಂಗಾಡಿ ಜೈನ ಬಸದಿ ಹಾಗೂ ಸ್ಥಳೀಯ ಮನೆಯವರ ಸಹಕಾರದಿಂದ ಪೈಪ್ ಅಳವಡಿಸಿ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಿದರು.

ಚರಂಡಿ ಅತೀ ಸಣ್ಣದು ಪ್ರತೀ ವರ್ಷ ಇಲ್ಲಿ ಮಳೆ ಬಂದರೆ ನೀರೆಲ್ಲಾ ಚರಂಡಿ ಇಲ್ಲದೆ ಮಾರ್ಗದಲ್ಲೇ ಹರಿಯುತ್ತದೆ. ನೀರು ತುಂಬಿ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರಿಗೆ , ಶಾಲಾ ಮಕ್ಕಳಿಗೆ ಕಷ್ಟವಾಗುತ್ತಿದೆ. ಪ್ರತೀ ವರ್ಷ ಮಳೆ ಬಂದರೆ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ವರದಿ ಪ್ರಕಟಿಸಿದ ಕೂಡಲೇ ಸ್ಪಂದಿಸಿ ದುರಸ್ತಿ ವ್ಯವಸ್ಥೆಯನ್ನು ಮಾಡಿದರು.

Related posts

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

Suddi Udaya

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!