23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ನಾರಾವಿ : ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಕಾಲೇಜು ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವo. ಸ್ವಾಮಿ ಜೆರೋಮ್ ಡಿ ಸೋಜ “ವಿದ್ಯಾರ್ಥಿ ಜೀವನದಲ್ಲಿ ವಹಿಸಿಕೊಂಡ ನಾಯಕತ್ವವೆಂಬ ಜವಾಬ್ದಾರಿ ಅವರ ಮುಂದಿನ ಜೀವನದಲ್ಲಿ ಶಿಸ್ತು, ಸಂಯಮ, ಸಂವಹನ ಮುಂತಾದ ಧನಾತ್ಮಕ ಗುಣಗಳನ್ನು ಬೆಳೆಸಿಕೊಳ್ಳುವುದಕ್ಕೆ ಸಹಕರಿಸುತ್ತದೆ”ಎಂದರು.

ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ವo. ಡಾ. ಆಲ್ವಿನ್ ಸೆರಾವೋ ಮಾತನಾಡಿ “ನಾಯಕತ್ವ ಗುಣ ತನ್ನಿಂದ ತಾನೆ ಯಾವತ್ತೂ ಬರುವುದಿಲ್ಲ. ಅದನ್ನು ಬೆಳೆಸಿಕೊಳ್ಳಬೇಕು.ಈಗ ಸಿಕ್ಕಿದ ಈ ಅವಕಾಶವನ್ನು ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿಯೂ ಮುಂದುವರಿಸಬೇಕು “ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ವಿದ್ಯಾರ್ಥಿ ಸಂಘದ ನಾಯಕಿ ಕು. ಗ್ಲೆನಿಷಾ, ಉಪನಾಯಕ ಕು. ಪ್ರಜ್ವಿ‌‌ತ್, ಕಾರ್ಯದರ್ಶಿ ಕು. ಶೈಲಿ ಉಪಸ್ಥಿತರಿದ್ದರು.ರಸಾಯನ ಶಾಸ್ತ್ರ ಉಪನ್ಯಾಸಕಿ ಶ್ರೇಮತಿ ಸೋನಿಯಾ ಡಿ ಸೋಜ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya
error: Content is protected !!