September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ನಾರಾವಿ : ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಕಾಲೇಜು ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವo. ಸ್ವಾಮಿ ಜೆರೋಮ್ ಡಿ ಸೋಜ “ವಿದ್ಯಾರ್ಥಿ ಜೀವನದಲ್ಲಿ ವಹಿಸಿಕೊಂಡ ನಾಯಕತ್ವವೆಂಬ ಜವಾಬ್ದಾರಿ ಅವರ ಮುಂದಿನ ಜೀವನದಲ್ಲಿ ಶಿಸ್ತು, ಸಂಯಮ, ಸಂವಹನ ಮುಂತಾದ ಧನಾತ್ಮಕ ಗುಣಗಳನ್ನು ಬೆಳೆಸಿಕೊಳ್ಳುವುದಕ್ಕೆ ಸಹಕರಿಸುತ್ತದೆ”ಎಂದರು.

ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ವo. ಡಾ. ಆಲ್ವಿನ್ ಸೆರಾವೋ ಮಾತನಾಡಿ “ನಾಯಕತ್ವ ಗುಣ ತನ್ನಿಂದ ತಾನೆ ಯಾವತ್ತೂ ಬರುವುದಿಲ್ಲ. ಅದನ್ನು ಬೆಳೆಸಿಕೊಳ್ಳಬೇಕು.ಈಗ ಸಿಕ್ಕಿದ ಈ ಅವಕಾಶವನ್ನು ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿಯೂ ಮುಂದುವರಿಸಬೇಕು “ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ವಿದ್ಯಾರ್ಥಿ ಸಂಘದ ನಾಯಕಿ ಕು. ಗ್ಲೆನಿಷಾ, ಉಪನಾಯಕ ಕು. ಪ್ರಜ್ವಿ‌‌ತ್, ಕಾರ್ಯದರ್ಶಿ ಕು. ಶೈಲಿ ಉಪಸ್ಥಿತರಿದ್ದರು.ರಸಾಯನ ಶಾಸ್ತ್ರ ಉಪನ್ಯಾಸಕಿ ಶ್ರೇಮತಿ ಸೋನಿಯಾ ಡಿ ಸೋಜ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಉಚಿತ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya
error: Content is protected !!