September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಜೂ. 28ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸೀತಾರಾಮ್ ಕೇವಳ ರವರು ಒಳ್ಳೆಯ ಶಿಕ್ಷಣ ಹೇಗಿರಬೇಕು, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳನ್ನು ಉತ್ತಮ ಮನುಷ್ಯನಾಗಿ ಮಾರ್ಪಾಡುವಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರದ ಕುರಿತು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ ಮತ್ತು ಶಾರೀರಿಕ ಬೆಳವಣಿಗೆಯ ಪ್ರಾಮುಖ್ಯ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಪೂವಾಜೆ ರವರು ಅಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾಗಿ ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ನೋಟರಿ, ವಕೀಲರು ಬೆಳ್ತಂಗಡಿ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, 2024-25ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನ್ ಗೌಡ, ಉಪಾಧ್ಯಕ್ಷರಾದ ಶ್ರೀಮತಿ ಲತಾ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಾಣಿ ವಿದ್ಯಾಸಂಸ್ಥೆಯ ಪ್ರೌಢ ಶಾಲಾ ಮುಖ್ಯೋಪಾದ್ಯಾಯರಾದ ಲಕ್ಷ್ಮೀನಾರಾಯಣ ಕೆ ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ಕಳೆದ ಶೈಕ್ಷಣಿಕ ವರ್ಷದಲ್ಲಿ ವಾಣಿ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಪ್ರಗತಿಯ ಬಗ್ಗೆ ಮಾಹಿತಿಯನ್ನು ನೀಡಿ, ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಮೊಹನಾಂಗಿ ಶಿಕ್ಷಕ-ರಕ್ಷಕ ಸಂಘದ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ ವಂದಿಸಿದರು. ಶಿಕ್ಷಕಿ ಶ್ರೀಮತಿ ಮಮತಾ ನಿರೂಪಿಸಿದರು. ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗಳು ಸಹಕರಿಸಿದರು.

Related posts

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಶಿಶಿಲ :2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!