30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

ಉಜಿರೆ: ‘ ಭಿತ್ತಿ ಪತ್ರಿಕೆ ಆಕರ್ಷಕವಾಗಿ ಕಾಣಬೇಕಾದರೆ ಅದರಲ್ಲಿ ಸೃಜನಾತ್ಮಕತೆ ಇರಬೇಕು ಮತ್ತು ವೈಶಿಷ್ಟ್ಯಪೂರ್ಣವಾದ ಮಾಹಿತಿಯನ್ನು ಒಳಗೊಂಡಿರಬೇಕು. ವಿದ್ಯಾರ್ಥಿಗಳ ಕೌಶಲ್ಯ ಅರಿಯಲು ಇದೊಂದು ಸಾಧನವಾಗಿದೆ ‘ ಎಂದು ಉಜಿರೆಯ ಶ್ರೀ ಧ. ಮಂ. ಕಾಲೇಜು ( ಸ್ವಾಯತ್ತ ) ಇಲ್ಲಿನ ಬಿ.ವೋಕ್, ಪೂರೈಕೆ ಸರಪಳಿ ನಿರ್ವಹಣೆ ವಿಭಾಗದ ಮುಖ್ಯಸ್ಥ ಅಶ್ವಿತ್ ಹೆಚ್ ಆರ್ ಅವರು ಹೇಳಿದರು..

ಅವರು ಉಜಿರೆಯ ಶ್ರೀ ಧ. ಮಂ. ಪದವಿ ಪೂರ್ವಕಾಲೇಜಿನ ಎಲ್ಲ ವಿಭಾಗಗಳ ಹಾಗೂ ಕ್ಲಬ್ ಗಳ ಭಿತ್ತಿಪತ್ರಿಕೆಗಳನ್ನು ಅನಾವರಣಗೊಳಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾದ, ಮಾಹಿತಿಪೂರ್ಣವಾದ ಸಂಗತಿಗಳನ್ನು ಮತ್ತು ಸಾಧಕರ ವಿಷಯಗಳನ್ನು ಪ್ರಸ್ತುತಪಡಿಸಿದರು.

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ. ಇವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಉಳಿದವರಿಗಿಂತ ಭಿನ್ನವಾಗಿ ಮಾಡುವ ಸೃಜನಾತ್ಮಕ ಕಾರ್ಯಗಳು ಯಾವತ್ತೂ ಹೆಚ್ಚಿನ ಯಶಸ್ಸನ್ನು ಪಡೆಯುತ್ತವೆ ಎಂದು ಸಾಧಕರ ಉದಾಹರಣೆ ಸಹಿತ ತಿಳಿಸಿದರು.

ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ ಹಾಗೂ ಕಾರ್ಯಕಾರಿ ಸಮಿತಿ ಮುಖ್ಯಸ್ಥೆ ಶ್ರೀಮತಿ ಬೇಬಿ ಎನ್., ಸದಸ್ಯರಾದ ಸವಿತಾ ಎಸ್., ಮನೋಹರ್ ಶೆಟ್ಟಿ, ಸ್ಮಿತಾ ಬೇಡೇಕರ್, ಮಹಾವೀರ್ ಜೈನ್, ಸುಪ್ರೀತಾ ಪಡಿವಾಳ್ ಹಾಗೂ ಪ್ರಾಧ್ಯಾಪಕ ವೃಂದ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಹಂಸಿನಿ ಭಿಡೆ ಕಾರ್ಯಕ್ರಮ ನಿರೂಪಿಸಿ, ಪರಿಚಯ ಮಾಡಿದರು. ನಿಜ ಕುಲಾಲ್ ಸ್ವಾಗತಿಸಿ , ಧನ್ಯವಾದ ಅರ್ಪಿಸಿದರು.

Related posts

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya

ಶುಭವಿವಾಹ ಕುಸುಮಾಧರ-ಪೂರ್ಣಿಮಾ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!