July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

ಉಜಿರೆ: ‘ ಭಿತ್ತಿ ಪತ್ರಿಕೆ ಆಕರ್ಷಕವಾಗಿ ಕಾಣಬೇಕಾದರೆ ಅದರಲ್ಲಿ ಸೃಜನಾತ್ಮಕತೆ ಇರಬೇಕು ಮತ್ತು ವೈಶಿಷ್ಟ್ಯಪೂರ್ಣವಾದ ಮಾಹಿತಿಯನ್ನು ಒಳಗೊಂಡಿರಬೇಕು. ವಿದ್ಯಾರ್ಥಿಗಳ ಕೌಶಲ್ಯ ಅರಿಯಲು ಇದೊಂದು ಸಾಧನವಾಗಿದೆ ‘ ಎಂದು ಉಜಿರೆಯ ಶ್ರೀ ಧ. ಮಂ. ಕಾಲೇಜು ( ಸ್ವಾಯತ್ತ ) ಇಲ್ಲಿನ ಬಿ.ವೋಕ್, ಪೂರೈಕೆ ಸರಪಳಿ ನಿರ್ವಹಣೆ ವಿಭಾಗದ ಮುಖ್ಯಸ್ಥ ಅಶ್ವಿತ್ ಹೆಚ್ ಆರ್ ಅವರು ಹೇಳಿದರು..

ಅವರು ಉಜಿರೆಯ ಶ್ರೀ ಧ. ಮಂ. ಪದವಿ ಪೂರ್ವಕಾಲೇಜಿನ ಎಲ್ಲ ವಿಭಾಗಗಳ ಹಾಗೂ ಕ್ಲಬ್ ಗಳ ಭಿತ್ತಿಪತ್ರಿಕೆಗಳನ್ನು ಅನಾವರಣಗೊಳಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾದ, ಮಾಹಿತಿಪೂರ್ಣವಾದ ಸಂಗತಿಗಳನ್ನು ಮತ್ತು ಸಾಧಕರ ವಿಷಯಗಳನ್ನು ಪ್ರಸ್ತುತಪಡಿಸಿದರು.

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ. ಇವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಉಳಿದವರಿಗಿಂತ ಭಿನ್ನವಾಗಿ ಮಾಡುವ ಸೃಜನಾತ್ಮಕ ಕಾರ್ಯಗಳು ಯಾವತ್ತೂ ಹೆಚ್ಚಿನ ಯಶಸ್ಸನ್ನು ಪಡೆಯುತ್ತವೆ ಎಂದು ಸಾಧಕರ ಉದಾಹರಣೆ ಸಹಿತ ತಿಳಿಸಿದರು.

ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ ಹಾಗೂ ಕಾರ್ಯಕಾರಿ ಸಮಿತಿ ಮುಖ್ಯಸ್ಥೆ ಶ್ರೀಮತಿ ಬೇಬಿ ಎನ್., ಸದಸ್ಯರಾದ ಸವಿತಾ ಎಸ್., ಮನೋಹರ್ ಶೆಟ್ಟಿ, ಸ್ಮಿತಾ ಬೇಡೇಕರ್, ಮಹಾವೀರ್ ಜೈನ್, ಸುಪ್ರೀತಾ ಪಡಿವಾಳ್ ಹಾಗೂ ಪ್ರಾಧ್ಯಾಪಕ ವೃಂದ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಹಂಸಿನಿ ಭಿಡೆ ಕಾರ್ಯಕ್ರಮ ನಿರೂಪಿಸಿ, ಪರಿಚಯ ಮಾಡಿದರು. ನಿಜ ಕುಲಾಲ್ ಸ್ವಾಗತಿಸಿ , ಧನ್ಯವಾದ ಅರ್ಪಿಸಿದರು.

Related posts

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!