ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

ಉಜಿರೆ: ‘ ಭಿತ್ತಿ ಪತ್ರಿಕೆ ಆಕರ್ಷಕವಾಗಿ ಕಾಣಬೇಕಾದರೆ ಅದರಲ್ಲಿ ಸೃಜನಾತ್ಮಕತೆ ಇರಬೇಕು ಮತ್ತು ವೈಶಿಷ್ಟ್ಯಪೂರ್ಣವಾದ ಮಾಹಿತಿಯನ್ನು ಒಳಗೊಂಡಿರಬೇಕು. ವಿದ್ಯಾರ್ಥಿಗಳ ಕೌಶಲ್ಯ ಅರಿಯಲು ಇದೊಂದು ಸಾಧನವಾಗಿದೆ ‘ ಎಂದು ಉಜಿರೆಯ ಶ್ರೀ ಧ. ಮಂ. ಕಾಲೇಜು ( ಸ್ವಾಯತ್ತ ) ಇಲ್ಲಿನ ಬಿ.ವೋಕ್, ಪೂರೈಕೆ ಸರಪಳಿ ನಿರ್ವಹಣೆ ವಿಭಾಗದ ಮುಖ್ಯಸ್ಥ ಅಶ್ವಿತ್ ಹೆಚ್ ಆರ್ ಅವರು ಹೇಳಿದರು..

ಅವರು ಉಜಿರೆಯ ಶ್ರೀ ಧ. ಮಂ. ಪದವಿ ಪೂರ್ವಕಾಲೇಜಿನ ಎಲ್ಲ ವಿಭಾಗಗಳ ಹಾಗೂ ಕ್ಲಬ್ ಗಳ ಭಿತ್ತಿಪತ್ರಿಕೆಗಳನ್ನು ಅನಾವರಣಗೊಳಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾದ, ಮಾಹಿತಿಪೂರ್ಣವಾದ ಸಂಗತಿಗಳನ್ನು ಮತ್ತು ಸಾಧಕರ ವಿಷಯಗಳನ್ನು ಪ್ರಸ್ತುತಪಡಿಸಿದರು.

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ. ಇವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಉಳಿದವರಿಗಿಂತ ಭಿನ್ನವಾಗಿ ಮಾಡುವ ಸೃಜನಾತ್ಮಕ ಕಾರ್ಯಗಳು ಯಾವತ್ತೂ ಹೆಚ್ಚಿನ ಯಶಸ್ಸನ್ನು ಪಡೆಯುತ್ತವೆ ಎಂದು ಸಾಧಕರ ಉದಾಹರಣೆ ಸಹಿತ ತಿಳಿಸಿದರು.

ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ ಹಾಗೂ ಕಾರ್ಯಕಾರಿ ಸಮಿತಿ ಮುಖ್ಯಸ್ಥೆ ಶ್ರೀಮತಿ ಬೇಬಿ ಎನ್., ಸದಸ್ಯರಾದ ಸವಿತಾ ಎಸ್., ಮನೋಹರ್ ಶೆಟ್ಟಿ, ಸ್ಮಿತಾ ಬೇಡೇಕರ್, ಮಹಾವೀರ್ ಜೈನ್, ಸುಪ್ರೀತಾ ಪಡಿವಾಳ್ ಹಾಗೂ ಪ್ರಾಧ್ಯಾಪಕ ವೃಂದ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಹಂಸಿನಿ ಭಿಡೆ ಕಾರ್ಯಕ್ರಮ ನಿರೂಪಿಸಿ, ಪರಿಚಯ ಮಾಡಿದರು. ನಿಜ ಕುಲಾಲ್ ಸ್ವಾಗತಿಸಿ , ಧನ್ಯವಾದ ಅರ್ಪಿಸಿದರು.

Related posts

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya
error: Content is protected !!