ಇಂದಬೆಟ್ಟು: ಇಂದಬೆಟ್ಟುವಿನಿಂದ ಎರ್ಮಾಳಕ್ಕೆ ಹೋಗುವ ರಸ್ತೆಯಲ್ಲಿ ಭಾರಿ ಮಳೆಯಿಂದಾಗಿ ಮಳೆ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೀರಾ ಕಷ್ಟವಾಗಿದೆ ಹಾಗೂ ರಸ್ತೆಯ ಎರಡೂ ಕಡೆಯಿಂದ ಗಿಡಗಳು ಬಾಗಿ ರಸ್ತೆ ಮುಚ್ಚಲು ಅಣಿಯಾಗುತ್ತಿದೆ.

ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವರಿಗೆ, ಅದರಲ್ಲೂ ಶಾಲಾ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದ್ದು ಪಕ್ಕದಲ್ಲಿ ಚರಂಡಿ ಇದ್ದರೂ ಚರಂಡಿ ರಿಪೇರಿ ಅಗದೇ ನೀರು ಮಾತ್ರ ರಸ್ತೆಯಲ್ಲಿ ಹರಿದು ಹೋಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಬಂಧಪಟ್ಟವರು ಆದಷ್ಟು ಬೇಗ ರಸ್ತೆಯ ಚರಂಡಿ ವ್ಯವಸ್ಥೆ ಮಾಡಿ ಬಾಗಿರುವ ಮರಗಳ ಗೆಲ್ಲುಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.











