22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

ಇಂದಬೆಟ್ಟು: ಇಂದಬೆಟ್ಟುವಿನಿಂದ ಎರ್ಮಾಳಕ್ಕೆ ಹೋಗುವ ರಸ್ತೆಯಲ್ಲಿ ಭಾರಿ ಮಳೆಯಿಂದಾಗಿ ಮಳೆ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೀರಾ ಕಷ್ಟವಾಗಿದೆ ಹಾಗೂ ರಸ್ತೆಯ ಎರಡೂ ಕಡೆಯಿಂದ ಗಿಡಗಳು ಬಾಗಿ ರಸ್ತೆ ಮುಚ್ಚಲು ಅಣಿಯಾಗುತ್ತಿದೆ.

ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವರಿಗೆ, ಅದರಲ್ಲೂ ಶಾಲಾ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದ್ದು ಪಕ್ಕದಲ್ಲಿ ಚರಂಡಿ ಇದ್ದರೂ ಚರಂಡಿ ರಿಪೇರಿ ಅಗದೇ ನೀರು ಮಾತ್ರ ರಸ್ತೆಯಲ್ಲಿ ಹರಿದು ಹೋಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟವರು ಆದಷ್ಟು ಬೇಗ ರಸ್ತೆಯ ಚರಂಡಿ ವ್ಯವಸ್ಥೆ ಮಾಡಿ ಬಾಗಿರುವ ಮರಗಳ ಗೆಲ್ಲುಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ

Suddi Udaya

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ; ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!