32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ಗುಂಡೂರಿ : ಇಲ್ಲಿಯ ಶಾಂತಿಗುಡ್ಡೆ ಎಂಬಲ್ಲಿ ಸುಭಾಷ್ ಪೂಜಾರಿ ಮನೆ ಬಳಿಯ ಗುಡ್ಡೆಯಲ್ಲಿ ಸೊಪ್ಪು ಕಡಿದು ತೆಂಗಿನ ಮರದ ಬುಡಕ್ಕೆ ತಂದು ಹಾಕುತ್ತಿದ್ದುದನ್ನು ಆಕ್ಷೇಪಿಸಿ ರಾಜು, ವಿನೋದ, ದೀಪಕ್ ರವರು ಸುಭಾಷ್ ಪೂಜಾರಿ ರವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ.ಎಂದು ಆರೋಪಿಸಿ ನೀಡಿದ ದೂರಿನಂತೆ ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿಜೂ.27ರಂದು ಪ್ರಕರಣ ದಾಖಲಾಗಿದೆ.


ಘಟನೆ ವಿವರ: ಜೂ.27 ರಂದು ಗುಂಡೂರಿ ಗ್ರಾಮದ ಶಾಂತಿಗುಡ್ಡೆ ಎಂಬಲ್ಲಿ ಸುಭಾಷ್ ಪೂಜಾರಿ ಎಂಬುವವರು ತನ್ನ ವಾಸದ ಮನೆಯಲ್ಲಿರುವ ಸಮಯ ರಾಜು ಮತ್ತು ಆತನ ಹೆಂಡತಿ ಶ್ರೀಮತಿ ವಿನೋದ ರವರು ಸುಭಾಷ್ ಪೂಜಾರಿ ಮನೆ ಬಳಿಯ ಗುಡ್ಡೆಯಲ್ಲಿ ಸೊಪ್ಪು ಕಡಿದು ಸುಭಾಷ್ ಪೂಜಾರಿ ಸ್ವಾಧೀನವಿರುವ ತೆಂಗಿನ ಮರದ ಬುಡಕ್ಕೆ ತಂದು ಹಾಕುತ್ತಿದ್ದುದನ್ನು ಕಂಡು ಸುಭಾಷ್ ಪೂಜಾರಿ ಆಕ್ಷೇಪಿಸಿದ್ದಕ್ಕೆ ರಾಜು ಎಂಬಾತನು ಸುಭಾಷ್ ಪೂಜಾರಿ ರವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ನಡೆಸಿ ಏಕಾಏಕಿಯಾಗಿ ರಾಜು, ವಿನೋದ ಮತ್ತು ಅವರ ಮಗನಾದ ದೀಪಕ್ ರವರುಗಳು ಸೇರಿ ದೊಣ್ಣೆಗಳಿಂದ ಸುಭಾಷ್ ಪೂಜಾರಿರವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿಸಲಾಗಿದೆ.ಹಲ್ಲೆಯಿಂದ ಸುಭಾಷ್ ಪೂಜಾರಿ ರವರಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya
error: Content is protected !!