July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ಗುಂಡೂರಿ : ಇಲ್ಲಿಯ ಶಾಂತಿಗುಡ್ಡೆ ಎಂಬಲ್ಲಿ ಸುಭಾಷ್ ಪೂಜಾರಿ ಮನೆ ಬಳಿಯ ಗುಡ್ಡೆಯಲ್ಲಿ ಸೊಪ್ಪು ಕಡಿದು ತೆಂಗಿನ ಮರದ ಬುಡಕ್ಕೆ ತಂದು ಹಾಕುತ್ತಿದ್ದುದನ್ನು ಆಕ್ಷೇಪಿಸಿ ರಾಜು, ವಿನೋದ, ದೀಪಕ್ ರವರು ಸುಭಾಷ್ ಪೂಜಾರಿ ರವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ.ಎಂದು ಆರೋಪಿಸಿ ನೀಡಿದ ದೂರಿನಂತೆ ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿಜೂ.27ರಂದು ಪ್ರಕರಣ ದಾಖಲಾಗಿದೆ.


ಘಟನೆ ವಿವರ: ಜೂ.27 ರಂದು ಗುಂಡೂರಿ ಗ್ರಾಮದ ಶಾಂತಿಗುಡ್ಡೆ ಎಂಬಲ್ಲಿ ಸುಭಾಷ್ ಪೂಜಾರಿ ಎಂಬುವವರು ತನ್ನ ವಾಸದ ಮನೆಯಲ್ಲಿರುವ ಸಮಯ ರಾಜು ಮತ್ತು ಆತನ ಹೆಂಡತಿ ಶ್ರೀಮತಿ ವಿನೋದ ರವರು ಸುಭಾಷ್ ಪೂಜಾರಿ ಮನೆ ಬಳಿಯ ಗುಡ್ಡೆಯಲ್ಲಿ ಸೊಪ್ಪು ಕಡಿದು ಸುಭಾಷ್ ಪೂಜಾರಿ ಸ್ವಾಧೀನವಿರುವ ತೆಂಗಿನ ಮರದ ಬುಡಕ್ಕೆ ತಂದು ಹಾಕುತ್ತಿದ್ದುದನ್ನು ಕಂಡು ಸುಭಾಷ್ ಪೂಜಾರಿ ಆಕ್ಷೇಪಿಸಿದ್ದಕ್ಕೆ ರಾಜು ಎಂಬಾತನು ಸುಭಾಷ್ ಪೂಜಾರಿ ರವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ನಡೆಸಿ ಏಕಾಏಕಿಯಾಗಿ ರಾಜು, ವಿನೋದ ಮತ್ತು ಅವರ ಮಗನಾದ ದೀಪಕ್ ರವರುಗಳು ಸೇರಿ ದೊಣ್ಣೆಗಳಿಂದ ಸುಭಾಷ್ ಪೂಜಾರಿರವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿಸಲಾಗಿದೆ.ಹಲ್ಲೆಯಿಂದ ಸುಭಾಷ್ ಪೂಜಾರಿ ರವರಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya
error: Content is protected !!