23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ಗುಂಡೂರಿ : ಇಲ್ಲಿಯ ಶಾಂತಿಗುಡ್ಡೆ ಎಂಬಲ್ಲಿ ಸುಭಾಷ್ ಪೂಜಾರಿ ಮನೆ ಬಳಿಯ ಗುಡ್ಡೆಯಲ್ಲಿ ಸೊಪ್ಪು ಕಡಿದು ತೆಂಗಿನ ಮರದ ಬುಡಕ್ಕೆ ತಂದು ಹಾಕುತ್ತಿದ್ದುದನ್ನು ಆಕ್ಷೇಪಿಸಿ ರಾಜು, ವಿನೋದ, ದೀಪಕ್ ರವರು ಸುಭಾಷ್ ಪೂಜಾರಿ ರವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ.ಎಂದು ಆರೋಪಿಸಿ ನೀಡಿದ ದೂರಿನಂತೆ ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿಜೂ.27ರಂದು ಪ್ರಕರಣ ದಾಖಲಾಗಿದೆ.


ಘಟನೆ ವಿವರ: ಜೂ.27 ರಂದು ಗುಂಡೂರಿ ಗ್ರಾಮದ ಶಾಂತಿಗುಡ್ಡೆ ಎಂಬಲ್ಲಿ ಸುಭಾಷ್ ಪೂಜಾರಿ ಎಂಬುವವರು ತನ್ನ ವಾಸದ ಮನೆಯಲ್ಲಿರುವ ಸಮಯ ರಾಜು ಮತ್ತು ಆತನ ಹೆಂಡತಿ ಶ್ರೀಮತಿ ವಿನೋದ ರವರು ಸುಭಾಷ್ ಪೂಜಾರಿ ಮನೆ ಬಳಿಯ ಗುಡ್ಡೆಯಲ್ಲಿ ಸೊಪ್ಪು ಕಡಿದು ಸುಭಾಷ್ ಪೂಜಾರಿ ಸ್ವಾಧೀನವಿರುವ ತೆಂಗಿನ ಮರದ ಬುಡಕ್ಕೆ ತಂದು ಹಾಕುತ್ತಿದ್ದುದನ್ನು ಕಂಡು ಸುಭಾಷ್ ಪೂಜಾರಿ ಆಕ್ಷೇಪಿಸಿದ್ದಕ್ಕೆ ರಾಜು ಎಂಬಾತನು ಸುಭಾಷ್ ಪೂಜಾರಿ ರವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ನಡೆಸಿ ಏಕಾಏಕಿಯಾಗಿ ರಾಜು, ವಿನೋದ ಮತ್ತು ಅವರ ಮಗನಾದ ದೀಪಕ್ ರವರುಗಳು ಸೇರಿ ದೊಣ್ಣೆಗಳಿಂದ ಸುಭಾಷ್ ಪೂಜಾರಿರವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿಸಲಾಗಿದೆ.ಹಲ್ಲೆಯಿಂದ ಸುಭಾಷ್ ಪೂಜಾರಿ ರವರಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!