24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.3 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡದ ಸಾಧನೆಗೆ ರೋಟರಿ ಕ್ಲಬ್ ಬೆಳ್ತಂಗಡಿಗೆ “ಡೈಮಂಡ್ ಕ್ಲಬ್ ಪ್ರಶಸ್ತಿ”ಯ ಗೌರವ: 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆರ್ಶಿವಾದ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನ ಎಲ್ಲಾ ಸದಸ್ಯರುಗಳ ಸಹಕಾರದಿಂದ ಈ ವರ್ಷ ಅತ್ಯುತ್ತಮ ಸೇವಾ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಾಯಿತು.ರೋಟರಿ ಜಿಲ್ಲೆಯ ದೊಡ್ಡ ಕ್ಲಬ್ ಗಳ ವಿಭಾಗದಲ್ಲಿ ಡೈಮಂಡ್ ಪ್ಲಸ್ ಪ್ರಶಸ್ತಿ ಪಡೆದಿರುವುದು ಅತ್ಯಂತ ಸಂತೋಷ ತಂದಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ತಿಳಿಸಿದರು.

ಅವರು ಜೂ.28 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ತಾಲೂಕಿನಲ್ಲಿನ ಬೇರೆ ಬೇರೆ ಅಗತ್ಯತೆಗಳನ್ನು ಅರಿತು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇಂತಹ ಕಾರ್ಯಕ್ರಮಗಳನ್ನು ಯೋಜನೆಗೆ ತರಲು ಸಹಕಾರ ನೀಡಿದ ಬೆಳ್ತಂಗಡಿಯ ಅನೇಕ ಸಂಘ ಸಂಸ್ಥೆಗಳು, ಬೆಂಗಳೂರಿನ ಸಿಎಸ್‌ಆ‌ರ್ ಪಾರ್ಟ್ನರ್ ಕಂಪೆನಿಗಳು ಮತ್ತು ಇಂದಿರಾನಗರ ಕ್ಲಬ್ ಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಬಂದಿರುವ ಈ ಎಲ್ಲಾ ಪ್ರಶಸ್ತಿಗಳು ಬೆಳ್ತಂಗಡಿ ರೋಟರಿ ಕ್ಲಬ್ ನ ಸರ್ವ ಸದಸ್ಯರ ಪರಿಶ್ರಮದ ಫಲವಾಗಿದೆ ಎಂದರು.

ನಿಯೋಜಿತ ಅಧ್ಯಕ್ಷ ಪ್ರಕಾಶ್ ತುಳಪುಳೆ ಮಾತನಾಡಿ ಕಳೆದ ವರ್ಷದ ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡ ಅತ್ಯುತ್ತಮ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಿ ಅತೀ ದೊಡ್ಡ ಗೌರವವಾದ ಡೈಮಂಡ್ ಪ್ಲಸ್ ಅವಾರ್ಡ್ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಮುಂದಿನ ನನ್ನ ಅವದಿಯಲ್ಲಿ ಹಲವಾರು ಸೇವಾ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ಮಾಡಲಿದ್ದೇವೆ. ಜು. 3ರಂದು ಪದಪ್ರದಾನ ಸಮಾರಂಭ ನಡರಯಲಿದೆ ಎಂದರು.

ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ನಿಯೋಜಿತ ಕಾರ್ಯದರ್ಶಿ ಡಾ.ಎಂ.ಎಂ ದಯಾಕರ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಲಾಯಿಲ ಗ್ರಾಮ ಪಂಚಾಯತ್ ವಾರ್ಡ್ ಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ

Suddi Udaya
error: Content is protected !!