25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದವನ ಮೇಲೆ ಸೋಡಾ ಬಾಟಲ್ ಬಿಸಾಕಿ ಕೊಲೆಗೆ ಯತ್ನಿಸಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿಯಲ್ಲಿ ಆರು ತಿಂಗಳ ಹಿಂದೆ ಕೆಲಸ ಮಾಡಿದ್ದ ಟಿಪ್ಪರ್ ವಾಹನದ ಬಾಡಿಗೆಯ 65 ಸಾವಿರ ರೂಪಾಯಿ ಹಣ ಬಾಡಿಗೆಗೆ ಕಳುಹಿಸಿದ್ದ ಮಧ್ಯವರ್ತಿ ಚಿಬಿದ್ರೆ ಗ್ರಾಮದ ಕಕ್ಕಿಂಜೆ ನಿವಾಸಿ ಮಹಮ್ಮದ್ ತೌಸಿಫ್ ಗೆ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿ ರಹೀಂ ನೀಡಲು ಬಾಕಿ ಇದ್ದು ಇದಕ್ಕಾಗಿ ಚಾರ್ಮಾಡಿ ಗ್ರಾಮದ ಬೀಟಿಗೆ ಜಂಕ್ಷನ್ ನಲ್ಲಿ ರಹೀಂ ಮತ್ತು ಮಹಮ್ಮದ್ ಫೈಯಾಜ್ ಇದ್ದ ಸ್ಥಳಕ್ಕೆ ಟಿಪ್ಪರ್ ಮಾಲಕ ಅರೀಫ್ ಜೊತೆ ಮಹಮ್ಮದ್ ತೌಸಿಫ್ ಜೂ.27 ರಂದು ಹಣ ಕೇಳಿದ್ದರು. ಈ ನಡುವೆ ರಹೀಂ ಮತ್ತು ಮಹಮ್ಮದ್ ಫೈಯಾಜ್ ಸೇರಿ ತೌಸಿಫ್ ಗೆ ಬೆದರಿಕೆ ಹಾಕಿ ಹಲ್ಲೆ ಮಾಡಿ ಬಳಿಕ ಮಹಮದ್ ತೌಸಿಫ್ ಗೆ ಪಕ್ಕದಲ್ಲಿದ್ದ ಸೋಡಾ ಬಾಟಲ್ ತೆಗೆದುಕೊಂಡು ರಹೀಂ ಬಿಸಾಕಿದ್ದಾನೆ. ಇದರಿಂದ ಮಹಮ್ಮದ್ ತೌಸಿಫ್ ಕಣ್ಣಿಗೆ ಗಂಭೀರ ಗಾಯವಾಗಿದೆ‌. ಇದರಿಂದ ತಕ್ಷಣ ಸ್ಥಳೀಯರೆಲ್ಲ ಸೇರಿ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿದ್ದರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.

ಈ ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸರು ಆಸ್ಪತ್ರೆಗೆ ತೆರಳಿ ಗಾಯಗೊಂಡ ಮಹಮ್ಮದ್ ತೌಸಿಫ್ ವಿಚಾರಿಸಿ ಮಹಮ್ಮದ್ ತೌಸಿಫ್ ಸ್ನೇಹಿತ ನೀಡಿದ ದೂರು ಮೇರೆಗೆ 109,118(2),115(2),351(2),352 r/w 3(5) BNS ಅಡಿಯಲ್ಲಿ ಚಾರ್ಮಾಡಿ ಗ್ರಾಮದ ಬೀಟಿಗೆ ನಿವಾಸಿಗಳಾದ ರಹೀಂ ಮತ್ತು ಮಹಮ್ಮದ್ ಫೈಯಾಜ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.27 ರಂದು ರಾತ್ರಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮಂಗಳೂರು ಮಹಮ್ಮದ್ ತೌಸಿಫ್ ದಾಖಲಾದ ಆಸ್ಪತ್ರೆಗೆ ಆರೋಪಿಗಳಾದ ರಹೀಂ ಮತ್ತು ಮಹಮ್ಮದ್ ಫೈಯಾಜ್ ಕೂಡ ದಾಖಲಾಗಿ ನಮಗೆ ಮಹಮ್ಮದ್ ತೌಸಿಫ್ ಹಲ್ಲೆ ನಡೆಸಿದ್ದಾರೆಂದು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಅದರಂತೆ ಧರ್ಮಸ್ಥಳ ಪೊಲೀಸರು ಜೂ. 28 ರಂದು ಬೆಳಗ್ಗೆ ಆಸ್ಪತ್ರೆಗೆ ತೆರಳಿ ಮಾಹಿತಿ ಕಲೆ ಹಾಕಿ ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya

ಲಯನ್ಸ್ ಪ್ರಾಂತೀಯ ಸಮ್ಮೇಳನ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya
error: Content is protected !!