25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ನಾರಾವಿ : ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಕಾಲೇಜು ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವo. ಸ್ವಾಮಿ ಜೆರೋಮ್ ಡಿ ಸೋಜ “ವಿದ್ಯಾರ್ಥಿ ಜೀವನದಲ್ಲಿ ವಹಿಸಿಕೊಂಡ ನಾಯಕತ್ವವೆಂಬ ಜವಾಬ್ದಾರಿ ಅವರ ಮುಂದಿನ ಜೀವನದಲ್ಲಿ ಶಿಸ್ತು, ಸಂಯಮ, ಸಂವಹನ ಮುಂತಾದ ಧನಾತ್ಮಕ ಗುಣಗಳನ್ನು ಬೆಳೆಸಿಕೊಳ್ಳುವುದಕ್ಕೆ ಸಹಕರಿಸುತ್ತದೆ”ಎಂದರು.

ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ವo. ಡಾ. ಆಲ್ವಿನ್ ಸೆರಾವೋ ಮಾತನಾಡಿ “ನಾಯಕತ್ವ ಗುಣ ತನ್ನಿಂದ ತಾನೆ ಯಾವತ್ತೂ ಬರುವುದಿಲ್ಲ. ಅದನ್ನು ಬೆಳೆಸಿಕೊಳ್ಳಬೇಕು.ಈಗ ಸಿಕ್ಕಿದ ಈ ಅವಕಾಶವನ್ನು ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿಯೂ ಮುಂದುವರಿಸಬೇಕು “ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ವಿದ್ಯಾರ್ಥಿ ಸಂಘದ ನಾಯಕಿ ಕು. ಗ್ಲೆನಿಷಾ, ಉಪನಾಯಕ ಕು. ಪ್ರಜ್ವಿ‌‌ತ್, ಕಾರ್ಯದರ್ಶಿ ಕು. ಶೈಲಿ ಉಪಸ್ಥಿತರಿದ್ದರು.ರಸಾಯನ ಶಾಸ್ತ್ರ ಉಪನ್ಯಾಸಕಿ ಶ್ರೇಮತಿ ಸೋನಿಯಾ ಡಿ ಸೋಜ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ತಾ| ಮಟ್ಟದ ಪುಟ್ ಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

Suddi Udaya

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya
error: Content is protected !!