22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ನಾರಾವಿ : ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಕಾಲೇಜು ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವo. ಸ್ವಾಮಿ ಜೆರೋಮ್ ಡಿ ಸೋಜ “ವಿದ್ಯಾರ್ಥಿ ಜೀವನದಲ್ಲಿ ವಹಿಸಿಕೊಂಡ ನಾಯಕತ್ವವೆಂಬ ಜವಾಬ್ದಾರಿ ಅವರ ಮುಂದಿನ ಜೀವನದಲ್ಲಿ ಶಿಸ್ತು, ಸಂಯಮ, ಸಂವಹನ ಮುಂತಾದ ಧನಾತ್ಮಕ ಗುಣಗಳನ್ನು ಬೆಳೆಸಿಕೊಳ್ಳುವುದಕ್ಕೆ ಸಹಕರಿಸುತ್ತದೆ”ಎಂದರು.

ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ವo. ಡಾ. ಆಲ್ವಿನ್ ಸೆರಾವೋ ಮಾತನಾಡಿ “ನಾಯಕತ್ವ ಗುಣ ತನ್ನಿಂದ ತಾನೆ ಯಾವತ್ತೂ ಬರುವುದಿಲ್ಲ. ಅದನ್ನು ಬೆಳೆಸಿಕೊಳ್ಳಬೇಕು.ಈಗ ಸಿಕ್ಕಿದ ಈ ಅವಕಾಶವನ್ನು ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿಯೂ ಮುಂದುವರಿಸಬೇಕು “ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ವಿದ್ಯಾರ್ಥಿ ಸಂಘದ ನಾಯಕಿ ಕು. ಗ್ಲೆನಿಷಾ, ಉಪನಾಯಕ ಕು. ಪ್ರಜ್ವಿ‌‌ತ್, ಕಾರ್ಯದರ್ಶಿ ಕು. ಶೈಲಿ ಉಪಸ್ಥಿತರಿದ್ದರು.ರಸಾಯನ ಶಾಸ್ತ್ರ ಉಪನ್ಯಾಸಕಿ ಶ್ರೇಮತಿ ಸೋನಿಯಾ ಡಿ ಸೋಜ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya
error: Content is protected !!