26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ 2025-26ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳ ಉದ್ಘಾಟನೆ ಜೂ.28 ರಂದು ನಡೆಯಿತು.

ಪೆರಿಂಜೆ ಶ್ರಿ ಧ.ಮಂ.ಅನುದಾನಿತ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಮುಕುಂದಚಂದ್ರ ಎಲ್.ಎನ್ ಅವರು ಉದ್ಘಾಟನೆ ನೆರವೇರಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, “ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಒಳ್ಳೆಯ ಅನುಭವ ಪಡೆದುಕೊಳ್ಳಬಹುದು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ “ಅವಕಾಶ ಬಳಸಿಕೊಂಡು ವಿಶೇಷ ವ್ಯಕ್ತಿತ್ವ ರೂಪಿಸಿಕೊಳ್ಳಿ” ಎಂದರು.

ಸಾಹಿತ್ಯ ಮತ್ತು ಕಲಾಸಂಘದಿಂದ ಆಯಿಷತ್ ಸಂಶಿಯ, ಹಿಂದಿ ಸಂಘದಿಂದ ತ್ರಿಷಾ ಜೈನ್, ಗಣಿತ ಸಂಘದಿಂದ ರಕ್ಷಾ ಎನ್, ವಿಜ್ಞಾನ ಸಂಘದಿಂದ ಅಂಕಿತಾ,ತುಳು ಸಂಘದಿಂದ ರಕ್ಷಾ ಕೆ, ಕ್ರೀಡಾ ಸಂಘದಿಂದ ಸಮ್ಯಕ್, ಇಂಟರ್ ರ್ಯಾಕ್ಟ ಕ್ಲಬ್ ನಿಂದ ನೇತ್ರಾವತಿ ವಾರ್ಷಿಕ ಚಟುವಟಿಕೆಗಳನ್ನು ಮಂಡಿಸಿದರು . ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಸುಮನ್ ಯು.ಎಸ್ ಸಂಘಟಿಸಿದರು.

ವಿದ್ಯಾರ್ಥಿಗಳಾದ ಅಶ್ವಿನಿ ಸ್ವಾಗತಿಸಿ ,ಮುರ್ಷಿದ ವಂದಿಸಿದರು. ಸೃಷ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಅಡಿಕೆ ಕೊಳೆರೋಗ ಬೆಳೆ ನಾಶ ಪರಿಹಾರಕ್ಕಾಗಿ ಸಿಎಂಗೆ ಅಬ್ದುಲ್ ರಝಾಕ್ ಮನವಿ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

Suddi Udaya
error: Content is protected !!