July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ 2025-26ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳ ಉದ್ಘಾಟನೆ ಜೂ.28 ರಂದು ನಡೆಯಿತು.

ಪೆರಿಂಜೆ ಶ್ರಿ ಧ.ಮಂ.ಅನುದಾನಿತ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಮುಕುಂದಚಂದ್ರ ಎಲ್.ಎನ್ ಅವರು ಉದ್ಘಾಟನೆ ನೆರವೇರಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, “ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಒಳ್ಳೆಯ ಅನುಭವ ಪಡೆದುಕೊಳ್ಳಬಹುದು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ “ಅವಕಾಶ ಬಳಸಿಕೊಂಡು ವಿಶೇಷ ವ್ಯಕ್ತಿತ್ವ ರೂಪಿಸಿಕೊಳ್ಳಿ” ಎಂದರು.

ಸಾಹಿತ್ಯ ಮತ್ತು ಕಲಾಸಂಘದಿಂದ ಆಯಿಷತ್ ಸಂಶಿಯ, ಹಿಂದಿ ಸಂಘದಿಂದ ತ್ರಿಷಾ ಜೈನ್, ಗಣಿತ ಸಂಘದಿಂದ ರಕ್ಷಾ ಎನ್, ವಿಜ್ಞಾನ ಸಂಘದಿಂದ ಅಂಕಿತಾ,ತುಳು ಸಂಘದಿಂದ ರಕ್ಷಾ ಕೆ, ಕ್ರೀಡಾ ಸಂಘದಿಂದ ಸಮ್ಯಕ್, ಇಂಟರ್ ರ್ಯಾಕ್ಟ ಕ್ಲಬ್ ನಿಂದ ನೇತ್ರಾವತಿ ವಾರ್ಷಿಕ ಚಟುವಟಿಕೆಗಳನ್ನು ಮಂಡಿಸಿದರು . ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಸುಮನ್ ಯು.ಎಸ್ ಸಂಘಟಿಸಿದರು.

ವಿದ್ಯಾರ್ಥಿಗಳಾದ ಅಶ್ವಿನಿ ಸ್ವಾಗತಿಸಿ ,ಮುರ್ಷಿದ ವಂದಿಸಿದರು. ಸೃಷ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!