22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೇಂಜರ್ಸ್ ಘಟಕದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.

ಧರ್ಮಸ್ಥಳ ಪೊಲೀಸ್ ಠಾಣೆಯ ಠಾಣಾಧಿಕಾರಿಯಾದ ಸಮರ್ಥ್ ಆರ್ ಗಾಣಿಗೇರ್ ಅವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಗೀತಾ ವಹಿಸಿದ್ದರು.

ದಿನಾಚರಣೆಯ ಪ್ರಯುಕ್ತ ಧರ್ಮಸ್ಥಳ ಪೊಲೀಸ್ ಠಾಣೆಯವರು ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿರುತ್ತಾರೆ.


ಶತಾಬ್ದಿ ವಿದ್ಯಾಲಯ ಸಮಿತಿ ಮುಂಡಾಜೆಯ ಸಂಚಾಲಕ ನಾರಾಯಣ ಫಡ್ಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರೇಂಜರ್ ಲೀಡರ್ ವಸಂತಿ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ. ಅರ್ ಧನ್ಯವಾದಗೈದರು.

Related posts

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಮಿಳುನಾಡಿನ ದಿನೇಶ್ ಬಾಲಸುಬ್ರಹ್ಮಣ್ಯರಿಂದ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ

Suddi Udaya

ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ಹಾಗೂ ವೆನ್ಲಾಕ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!