22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

ಬೆಳ್ತಂಗಡಿ: ಈಕೆ ರೀಲ್ಸ್‌ ತಾರೆ, ಮೈಕ್ ಹಿಡಿದರೆ ಗಾನ ಕೋಗಿಲೆ, ಕ್ಯಾಮಾರಕ್ಕೆ ಫೋಸ್ ನೀಡುವ ಈ ಚೆಲುವೆ ಇದೀಗ ಸೀರಿಯಲ್ ಬೆಡಗಿ. ಹೌದು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಂದಗೋಕುಲ ‘ಧಾರಾವಾಹಿಯಲ್ಲಿ ನಂದನ ಕಿರಿಯ ಮಗಳಾದ ರಕ್ಷಾ ಪಾತ್ರಧಾರಿ ಕೃಷ್ಣಪ್ರಿಯಾ ಭಟ್ ಮೂಲತಃ ಬೆಳ್ತಂಗಡಿ ತಾಲೂಕಿನ ನಾರಾವಿಯವರು.

ರೀಲ್ಸ್‌ ಮಾಡಿ ಎಡವಟ್ಟು ಮಾಡಿಕೊಂಡವರನ್ನು ಎಷ್ಟೋ ಮಂದಿಯನ್ನು ನೋಡಿದ್ದೇವೆ. ಆದರೆ ರೀಲ್ಸ್‌ ಮಾಡುವುದೇ ಇತ್ತಿಚೀನ ದಿನಗಳಲ್ಲಿ ಕೆಲವರಿಗೆ ಹವ್ಯಾಸ ಹಾಗೂ ರೂಢಿಯಾಗಿದೆ. ಕೃಷ್ಣಪ್ರಿಯಾ ಭಟ್ ರೀಲ್ಸ್‌ ಮಾಡುವ ಹವ್ಯಾಸ ಹೊಂದಿದ್ದರು. ಆ ಹವ್ಯಾಸ ಇಂದು ಅವರನ್ನು ಕಿರುತೆರಗೆ ಪರಿಚಯಿಸಿದೆ. ತಾವು ಮಾಡುತ್ತಿರುವ ರೀಲ್ಸ್‌ಗಳನ್ನು ಕಂಡ ಕಲರ್ಸ್ ಕನ್ನಡ ವಾಹಿನಿಯಿಂದ ನೇರವಾಗಿ ಅವರಿಗೆ ಕರೆ ಬಂದು, ಮೊಬೈಲ್ ಮೂಲಕ ಅಡೀಷನ್ ಮಾಡಿ ಅದರಲ್ಲಿ ಆಯ್ಕೆಯಾಗಿ ನಂದಗೋಕುಲ ತಂಡಕ್ಕೆ ಹಾಗೂ ಕಿರುತೆರೆಗೆ ಪಾದರ್ಪಣೆ ಮಾಡಿದರು.

ನಂದಗೋಕುಲ ‘ಧಾರವಾಹಿ ಒಂದು ತಿಂಗಳಿನಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸರವಾಗುತ್ತಿದ್ದು ಜನಮನಗಳಿಸುತ್ತಿದೆ. ನಂದನ ಮಗಳಾಗಿ ಕಾಣಿಸಿಕೊಂಡಿರುವ ಕೃಷ್ಣಪ್ರಿಯಾ ಭಟ್ ಪ್ರೇಕ್ಷಕರ ಪ್ರೀತಿಗಳಿಸುತ್ತಿದ್ದಾರೆ. ಈಕೆ ನಮ್ಮೂರಿನ ಹೆಮ್ಮೆಯ ಪ್ರತಿಭೆಯಾಗಿದ್ದು ಇವರ ಬಗ್ಗೆ ಸಂಪೂರ್ಣ ವಿಶೇಷ ವರದಿ ಸುದ್ದಿ ಉದಯ ವಾರಪತ್ರಿಕೆಯಲ್ಲಿ ಗುರುವಾರ ಪ್ರಕಟಗೊಳ್ಳಲಿದ್ದು ಅಲ್ಲಿಯವರೆಗೆ ನೀರಿಕ್ಷಿಸಿ…

Related posts

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya
error: Content is protected !!