ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

ಉಜಿರೆ: ‘ ಭಿತ್ತಿ ಪತ್ರಿಕೆ ಆಕರ್ಷಕವಾಗಿ ಕಾಣಬೇಕಾದರೆ ಅದರಲ್ಲಿ ಸೃಜನಾತ್ಮಕತೆ ಇರಬೇಕು ಮತ್ತು ವೈಶಿಷ್ಟ್ಯಪೂರ್ಣವಾದ ಮಾಹಿತಿಯನ್ನು ಒಳಗೊಂಡಿರಬೇಕು. ವಿದ್ಯಾರ್ಥಿಗಳ ಕೌಶಲ್ಯ ಅರಿಯಲು ಇದೊಂದು ಸಾಧನವಾಗಿದೆ ‘ ಎಂದು ಉಜಿರೆಯ ಶ್ರೀ ಧ. ಮಂ. ಕಾಲೇಜು ( ಸ್ವಾಯತ್ತ ) ಇಲ್ಲಿನ ಬಿ.ವೋಕ್, ಪೂರೈಕೆ ಸರಪಳಿ ನಿರ್ವಹಣೆ ವಿಭಾಗದ ಮುಖ್ಯಸ್ಥ ಅಶ್ವಿತ್ ಹೆಚ್ ಆರ್ ಅವರು ಹೇಳಿದರು..

ಅವರು ಉಜಿರೆಯ ಶ್ರೀ ಧ. ಮಂ. ಪದವಿ ಪೂರ್ವಕಾಲೇಜಿನ ಎಲ್ಲ ವಿಭಾಗಗಳ ಹಾಗೂ ಕ್ಲಬ್ ಗಳ ಭಿತ್ತಿಪತ್ರಿಕೆಗಳನ್ನು ಅನಾವರಣಗೊಳಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾದ, ಮಾಹಿತಿಪೂರ್ಣವಾದ ಸಂಗತಿಗಳನ್ನು ಮತ್ತು ಸಾಧಕರ ವಿಷಯಗಳನ್ನು ಪ್ರಸ್ತುತಪಡಿಸಿದರು.

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ. ಇವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಉಳಿದವರಿಗಿಂತ ಭಿನ್ನವಾಗಿ ಮಾಡುವ ಸೃಜನಾತ್ಮಕ ಕಾರ್ಯಗಳು ಯಾವತ್ತೂ ಹೆಚ್ಚಿನ ಯಶಸ್ಸನ್ನು ಪಡೆಯುತ್ತವೆ ಎಂದು ಸಾಧಕರ ಉದಾಹರಣೆ ಸಹಿತ ತಿಳಿಸಿದರು.

ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ ಹಾಗೂ ಕಾರ್ಯಕಾರಿ ಸಮಿತಿ ಮುಖ್ಯಸ್ಥೆ ಶ್ರೀಮತಿ ಬೇಬಿ ಎನ್., ಸದಸ್ಯರಾದ ಸವಿತಾ ಎಸ್., ಮನೋಹರ್ ಶೆಟ್ಟಿ, ಸ್ಮಿತಾ ಬೇಡೇಕರ್, ಮಹಾವೀರ್ ಜೈನ್, ಸುಪ್ರೀತಾ ಪಡಿವಾಳ್ ಹಾಗೂ ಪ್ರಾಧ್ಯಾಪಕ ವೃಂದ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಹಂಸಿನಿ ಭಿಡೆ ಕಾರ್ಯಕ್ರಮ ನಿರೂಪಿಸಿ, ಪರಿಚಯ ಮಾಡಿದರು. ನಿಜ ಕುಲಾಲ್ ಸ್ವಾಗತಿಸಿ , ಧನ್ಯವಾದ ಅರ್ಪಿಸಿದರು.

Related posts

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಆ.17ರವರೆಗೆ ಬೆಳೆ ವಿಮೆ ಪಾವತಿಗೆ ಅವಧಿ ವಿಸ್ತರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya
error: Content is protected !!