July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

ಉಜಿರೆ: ‘ ಭಿತ್ತಿ ಪತ್ರಿಕೆ ಆಕರ್ಷಕವಾಗಿ ಕಾಣಬೇಕಾದರೆ ಅದರಲ್ಲಿ ಸೃಜನಾತ್ಮಕತೆ ಇರಬೇಕು ಮತ್ತು ವೈಶಿಷ್ಟ್ಯಪೂರ್ಣವಾದ ಮಾಹಿತಿಯನ್ನು ಒಳಗೊಂಡಿರಬೇಕು. ವಿದ್ಯಾರ್ಥಿಗಳ ಕೌಶಲ್ಯ ಅರಿಯಲು ಇದೊಂದು ಸಾಧನವಾಗಿದೆ ‘ ಎಂದು ಉಜಿರೆಯ ಶ್ರೀ ಧ. ಮಂ. ಕಾಲೇಜು ( ಸ್ವಾಯತ್ತ ) ಇಲ್ಲಿನ ಬಿ.ವೋಕ್, ಪೂರೈಕೆ ಸರಪಳಿ ನಿರ್ವಹಣೆ ವಿಭಾಗದ ಮುಖ್ಯಸ್ಥ ಅಶ್ವಿತ್ ಹೆಚ್ ಆರ್ ಅವರು ಹೇಳಿದರು..

ಅವರು ಉಜಿರೆಯ ಶ್ರೀ ಧ. ಮಂ. ಪದವಿ ಪೂರ್ವಕಾಲೇಜಿನ ಎಲ್ಲ ವಿಭಾಗಗಳ ಹಾಗೂ ಕ್ಲಬ್ ಗಳ ಭಿತ್ತಿಪತ್ರಿಕೆಗಳನ್ನು ಅನಾವರಣಗೊಳಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾದ, ಮಾಹಿತಿಪೂರ್ಣವಾದ ಸಂಗತಿಗಳನ್ನು ಮತ್ತು ಸಾಧಕರ ವಿಷಯಗಳನ್ನು ಪ್ರಸ್ತುತಪಡಿಸಿದರು.

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ. ಇವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಉಳಿದವರಿಗಿಂತ ಭಿನ್ನವಾಗಿ ಮಾಡುವ ಸೃಜನಾತ್ಮಕ ಕಾರ್ಯಗಳು ಯಾವತ್ತೂ ಹೆಚ್ಚಿನ ಯಶಸ್ಸನ್ನು ಪಡೆಯುತ್ತವೆ ಎಂದು ಸಾಧಕರ ಉದಾಹರಣೆ ಸಹಿತ ತಿಳಿಸಿದರು.

ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ ಹಾಗೂ ಕಾರ್ಯಕಾರಿ ಸಮಿತಿ ಮುಖ್ಯಸ್ಥೆ ಶ್ರೀಮತಿ ಬೇಬಿ ಎನ್., ಸದಸ್ಯರಾದ ಸವಿತಾ ಎಸ್., ಮನೋಹರ್ ಶೆಟ್ಟಿ, ಸ್ಮಿತಾ ಬೇಡೇಕರ್, ಮಹಾವೀರ್ ಜೈನ್, ಸುಪ್ರೀತಾ ಪಡಿವಾಳ್ ಹಾಗೂ ಪ್ರಾಧ್ಯಾಪಕ ವೃಂದ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಹಂಸಿನಿ ಭಿಡೆ ಕಾರ್ಯಕ್ರಮ ನಿರೂಪಿಸಿ, ಪರಿಚಯ ಮಾಡಿದರು. ನಿಜ ಕುಲಾಲ್ ಸ್ವಾಗತಿಸಿ , ಧನ್ಯವಾದ ಅರ್ಪಿಸಿದರು.

Related posts

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ವೇಣೂರು: ಎಕ್ಸೆಲ್ ನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಮಂತ್ ಕುಮಾರ್ ಜೈನ್ ರಿಂದ ಮಾರ್ಗದರ್ಶನ

Suddi Udaya

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!