ಸುಲ್ಕೇರಿ: ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ,. ಶ್ರೀರಾಮ ಪ್ರೌಢಶಾಲೆ ಸುಲ್ಕೇರಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ , ಮಂಗಳೂರು, ಇವರ ಸಾರಥ್ಯದಲ್ಲಿ ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜು ಪೂಜಾರಿ ವಹಿಸಿಕೊಂಡರು. ಪ್ರಕಾಶ್ ಶೆಟ್ಟಿನೊಚ್ಚ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅಭ್ಯಾಗತರಾಗಿ ಶಾಲಾ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಟ್ರಸ್ಟಿಗಳಾದ ಲ| ದೇವದಾಸ್ ಶೆಟ್ಟಿ, ಪಟ್ಲ ಪೌಂಡೇಶನ್ ಯಕ್ಷ ಶಿಕ್ಷಣ ಬೆಳ್ತಂಗಡಿ ಘಟಕದ ಸ್ಥಾಪಕಾಧ್ಯಕ್ಷ ರಘುರಾಮ ಶೆಟ್ಟಿ, ಯಕ್ಷಧ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕ ಅಧ್ಯಕ್ಷ ಸುರೇಶ್ ಶೆಟ್ಟಿ, ಯಕ್ಷಗಾನ ಗುರುಗಳಾದ ಶ್ರೀದೇವಿ ಪ್ರಸಾದ್ ಗುರುವಾಯನಕೆರೆ, ಶ್ರೀರಾಮ ಪ್ರೌಢಶಾಲಾ ಮುಖ್ಯೋಪಾದ್ಯಾಯ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.
ಪ್ರಮೋದ್ ಕುಮಾರ್ ಸ್ವಾಗತಿಸಿ, ಶಿಕ್ಷಕಿ ಶ್ರಿಮತಿ ಶಶಿಕಲಾ ವಂದಿಸಿದರು. ಶಿಕ್ಷಕರಾದ ಸತೀಶ್ ಕುಮಾರ್ ಎನ್ ಕಾರ್ಯಕ್ರಮ ನಿರೂಪಿಸಿದರು.











