
ಕಡಿರುದ್ಯಾವರ-ಮಿತ್ತಬಾಗಿಲು- ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಮರಗಳು ಬೆಳೆದು ನಿಂತಿದ್ದು ವಾಹನ ಸವಾರರಿಗೆ ಯಮಧರ್ಮರಾಯ ಪಾಶ ಹಿಡಿದು ಕಾದು ಕುಳಿತಂತೆ ಅದರ ಕೊಂಬೆಗಳು ರಸ್ತೆಗೆ ವಾಲಿಕೊಂಡು ಯಾವ ಸಂದರ್ಭದಲ್ಲೂ ಬೀಳುವ ಆತಂಕಕರ ಸ್ಥಿತಿ ನಿರ್ಮಾಣವಾಗಿದೆ ಎಂದು ಜೂ. 5 ರಂದು ಸುದ್ದಿ ಉದಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಿತ್ತು.
ಈ ಬಗ್ಗೆ ಎಚ್ಚೆತ್ತ ಅರಣ್ಯಾಧಿಕಾರಿಗಳು ಇತ್ತೀಚೆಗೆ ಮರಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.











