July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

ಇಂದಬೆಟ್ಟು: ಇಂದಬೆಟ್ಟುವಿನಿಂದ ಎರ್ಮಾಳಕ್ಕೆ ಹೋಗುವ ರಸ್ತೆಯಲ್ಲಿ ಭಾರಿ ಮಳೆಯಿಂದಾಗಿ ಮಳೆ ನೀರು ರಸ್ತೆಯಲ್ಲೆ ಹರಿಯುತ್ತಿದ್ದು ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೀರಾ ಕಷ್ಟವಾಗಿದೆ ಹಾಗೂ ರಸ್ತೆಯ ಎರಡೂ ಕಡೆಯಿಂದ ಗಿಡಗಳು ಬಾಗಿ ರಸ್ತೆ ಮುಚ್ಚಲು ಅಣಿಯಾಗುತ್ತಿದೆ.

ಇದರಿಂದ ರಸ್ತೆಯಲ್ಲಿ ನಡೆದುಕೊಂಡು ಹೋಗುವರಿಗೆ, ಅದರಲ್ಲೂ ಶಾಲಾ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದ್ದು ಪಕ್ಕದಲ್ಲಿ ಚರಂಡಿ ಇದ್ದರೂ ಚರಂಡಿ ರಿಪೇರಿ ಅಗದೇ ನೀರು ಮಾತ್ರ ರಸ್ತೆಯಲ್ಲಿ ಹರಿದು ಹೋಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟವರು ಆದಷ್ಟು ಬೇಗ ರಸ್ತೆಯ ಚರಂಡಿ ವ್ಯವಸ್ಥೆ ಮಾಡಿ ಬಾಗಿರುವ ಮರಗಳ ಗೆಲ್ಲುಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya
error: Content is protected !!