September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ಗುಂಡೂರಿ : ಇಲ್ಲಿಯ ಶಾಂತಿಗುಡ್ಡೆ ಎಂಬಲ್ಲಿ ಸುಭಾಷ್ ಪೂಜಾರಿ ಮನೆ ಬಳಿಯ ಗುಡ್ಡೆಯಲ್ಲಿ ಸೊಪ್ಪು ಕಡಿದು ತೆಂಗಿನ ಮರದ ಬುಡಕ್ಕೆ ತಂದು ಹಾಕುತ್ತಿದ್ದುದನ್ನು ಆಕ್ಷೇಪಿಸಿ ರಾಜು, ವಿನೋದ, ದೀಪಕ್ ರವರು ಸುಭಾಷ್ ಪೂಜಾರಿ ರವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ.ಎಂದು ಆರೋಪಿಸಿ ನೀಡಿದ ದೂರಿನಂತೆ ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿಜೂ.27ರಂದು ಪ್ರಕರಣ ದಾಖಲಾಗಿದೆ.


ಘಟನೆ ವಿವರ: ಜೂ.27 ರಂದು ಗುಂಡೂರಿ ಗ್ರಾಮದ ಶಾಂತಿಗುಡ್ಡೆ ಎಂಬಲ್ಲಿ ಸುಭಾಷ್ ಪೂಜಾರಿ ಎಂಬುವವರು ತನ್ನ ವಾಸದ ಮನೆಯಲ್ಲಿರುವ ಸಮಯ ರಾಜು ಮತ್ತು ಆತನ ಹೆಂಡತಿ ಶ್ರೀಮತಿ ವಿನೋದ ರವರು ಸುಭಾಷ್ ಪೂಜಾರಿ ಮನೆ ಬಳಿಯ ಗುಡ್ಡೆಯಲ್ಲಿ ಸೊಪ್ಪು ಕಡಿದು ಸುಭಾಷ್ ಪೂಜಾರಿ ಸ್ವಾಧೀನವಿರುವ ತೆಂಗಿನ ಮರದ ಬುಡಕ್ಕೆ ತಂದು ಹಾಕುತ್ತಿದ್ದುದನ್ನು ಕಂಡು ಸುಭಾಷ್ ಪೂಜಾರಿ ಆಕ್ಷೇಪಿಸಿದ್ದಕ್ಕೆ ರಾಜು ಎಂಬಾತನು ಸುಭಾಷ್ ಪೂಜಾರಿ ರವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ನಡೆಸಿ ಏಕಾಏಕಿಯಾಗಿ ರಾಜು, ವಿನೋದ ಮತ್ತು ಅವರ ಮಗನಾದ ದೀಪಕ್ ರವರುಗಳು ಸೇರಿ ದೊಣ್ಣೆಗಳಿಂದ ಸುಭಾಷ್ ಪೂಜಾರಿರವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿಸಲಾಗಿದೆ.ಹಲ್ಲೆಯಿಂದ ಸುಭಾಷ್ ಪೂಜಾರಿ ರವರಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಚಾರ್ಮಾಡಿ : ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya
error: Content is protected !!