July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ಗುಂಡೂರಿ : ಇಲ್ಲಿಯ ಶಾಂತಿಗುಡ್ಡೆ ಎಂಬಲ್ಲಿ ಸುಭಾಷ್ ಪೂಜಾರಿ ಮನೆ ಬಳಿಯ ಗುಡ್ಡೆಯಲ್ಲಿ ಸೊಪ್ಪು ಕಡಿದು ತೆಂಗಿನ ಮರದ ಬುಡಕ್ಕೆ ತಂದು ಹಾಕುತ್ತಿದ್ದುದನ್ನು ಆಕ್ಷೇಪಿಸಿ ರಾಜು, ವಿನೋದ, ದೀಪಕ್ ರವರು ಸುಭಾಷ್ ಪೂಜಾರಿ ರವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ.ಎಂದು ಆರೋಪಿಸಿ ನೀಡಿದ ದೂರಿನಂತೆ ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿಜೂ.27ರಂದು ಪ್ರಕರಣ ದಾಖಲಾಗಿದೆ.


ಘಟನೆ ವಿವರ: ಜೂ.27 ರಂದು ಗುಂಡೂರಿ ಗ್ರಾಮದ ಶಾಂತಿಗುಡ್ಡೆ ಎಂಬಲ್ಲಿ ಸುಭಾಷ್ ಪೂಜಾರಿ ಎಂಬುವವರು ತನ್ನ ವಾಸದ ಮನೆಯಲ್ಲಿರುವ ಸಮಯ ರಾಜು ಮತ್ತು ಆತನ ಹೆಂಡತಿ ಶ್ರೀಮತಿ ವಿನೋದ ರವರು ಸುಭಾಷ್ ಪೂಜಾರಿ ಮನೆ ಬಳಿಯ ಗುಡ್ಡೆಯಲ್ಲಿ ಸೊಪ್ಪು ಕಡಿದು ಸುಭಾಷ್ ಪೂಜಾರಿ ಸ್ವಾಧೀನವಿರುವ ತೆಂಗಿನ ಮರದ ಬುಡಕ್ಕೆ ತಂದು ಹಾಕುತ್ತಿದ್ದುದನ್ನು ಕಂಡು ಸುಭಾಷ್ ಪೂಜಾರಿ ಆಕ್ಷೇಪಿಸಿದ್ದಕ್ಕೆ ರಾಜು ಎಂಬಾತನು ಸುಭಾಷ್ ಪೂಜಾರಿ ರವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಗಲಾಟೆ ನಡೆಸಿ ಏಕಾಏಕಿಯಾಗಿ ರಾಜು, ವಿನೋದ ಮತ್ತು ಅವರ ಮಗನಾದ ದೀಪಕ್ ರವರುಗಳು ಸೇರಿ ದೊಣ್ಣೆಗಳಿಂದ ಸುಭಾಷ್ ಪೂಜಾರಿರವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿಸಲಾಗಿದೆ.ಹಲ್ಲೆಯಿಂದ ಸುಭಾಷ್ ಪೂಜಾರಿ ರವರಿಗೆ ಗಾಯಗಳಾಗಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!