32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ನಾರಾವಿ : ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಕಾಲೇಜು ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವo. ಸ್ವಾಮಿ ಜೆರೋಮ್ ಡಿ ಸೋಜ “ವಿದ್ಯಾರ್ಥಿ ಜೀವನದಲ್ಲಿ ವಹಿಸಿಕೊಂಡ ನಾಯಕತ್ವವೆಂಬ ಜವಾಬ್ದಾರಿ ಅವರ ಮುಂದಿನ ಜೀವನದಲ್ಲಿ ಶಿಸ್ತು, ಸಂಯಮ, ಸಂವಹನ ಮುಂತಾದ ಧನಾತ್ಮಕ ಗುಣಗಳನ್ನು ಬೆಳೆಸಿಕೊಳ್ಳುವುದಕ್ಕೆ ಸಹಕರಿಸುತ್ತದೆ”ಎಂದರು.

ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ವo. ಡಾ. ಆಲ್ವಿನ್ ಸೆರಾವೋ ಮಾತನಾಡಿ “ನಾಯಕತ್ವ ಗುಣ ತನ್ನಿಂದ ತಾನೆ ಯಾವತ್ತೂ ಬರುವುದಿಲ್ಲ. ಅದನ್ನು ಬೆಳೆಸಿಕೊಳ್ಳಬೇಕು.ಈಗ ಸಿಕ್ಕಿದ ಈ ಅವಕಾಶವನ್ನು ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿಯೂ ಮುಂದುವರಿಸಬೇಕು “ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ವಿದ್ಯಾರ್ಥಿ ಸಂಘದ ನಾಯಕಿ ಕು. ಗ್ಲೆನಿಷಾ, ಉಪನಾಯಕ ಕು. ಪ್ರಜ್ವಿ‌‌ತ್, ಕಾರ್ಯದರ್ಶಿ ಕು. ಶೈಲಿ ಉಪಸ್ಥಿತರಿದ್ದರು.ರಸಾಯನ ಶಾಸ್ತ್ರ ಉಪನ್ಯಾಸಕಿ ಶ್ರೇಮತಿ ಸೋನಿಯಾ ಡಿ ಸೋಜ ಕಾರ್ಯಕ್ರಮ ನಿರೂಪಿಸಿದರು.

Related posts

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya
error: Content is protected !!