23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ನಾರಾವಿ : ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಕಾಲೇಜು ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವo. ಸ್ವಾಮಿ ಜೆರೋಮ್ ಡಿ ಸೋಜ “ವಿದ್ಯಾರ್ಥಿ ಜೀವನದಲ್ಲಿ ವಹಿಸಿಕೊಂಡ ನಾಯಕತ್ವವೆಂಬ ಜವಾಬ್ದಾರಿ ಅವರ ಮುಂದಿನ ಜೀವನದಲ್ಲಿ ಶಿಸ್ತು, ಸಂಯಮ, ಸಂವಹನ ಮುಂತಾದ ಧನಾತ್ಮಕ ಗುಣಗಳನ್ನು ಬೆಳೆಸಿಕೊಳ್ಳುವುದಕ್ಕೆ ಸಹಕರಿಸುತ್ತದೆ”ಎಂದರು.

ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ವo. ಡಾ. ಆಲ್ವಿನ್ ಸೆರಾವೋ ಮಾತನಾಡಿ “ನಾಯಕತ್ವ ಗುಣ ತನ್ನಿಂದ ತಾನೆ ಯಾವತ್ತೂ ಬರುವುದಿಲ್ಲ. ಅದನ್ನು ಬೆಳೆಸಿಕೊಳ್ಳಬೇಕು.ಈಗ ಸಿಕ್ಕಿದ ಈ ಅವಕಾಶವನ್ನು ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿಯೂ ಮುಂದುವರಿಸಬೇಕು “ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ವಿದ್ಯಾರ್ಥಿ ಸಂಘದ ನಾಯಕಿ ಕು. ಗ್ಲೆನಿಷಾ, ಉಪನಾಯಕ ಕು. ಪ್ರಜ್ವಿ‌‌ತ್, ಕಾರ್ಯದರ್ಶಿ ಕು. ಶೈಲಿ ಉಪಸ್ಥಿತರಿದ್ದರು.ರಸಾಯನ ಶಾಸ್ತ್ರ ಉಪನ್ಯಾಸಕಿ ಶ್ರೇಮತಿ ಸೋನಿಯಾ ಡಿ ಸೋಜ ಕಾರ್ಯಕ್ರಮ ನಿರೂಪಿಸಿದರು.

Related posts

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya
error: Content is protected !!