23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ 2025-26ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳ ಉದ್ಘಾಟನೆ ಜೂ.28 ರಂದು ನಡೆಯಿತು.

ಪೆರಿಂಜೆ ಶ್ರಿ ಧ.ಮಂ.ಅನುದಾನಿತ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಮುಕುಂದಚಂದ್ರ ಎಲ್.ಎನ್ ಅವರು ಉದ್ಘಾಟನೆ ನೆರವೇರಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, “ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಒಳ್ಳೆಯ ಅನುಭವ ಪಡೆದುಕೊಳ್ಳಬಹುದು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ “ಅವಕಾಶ ಬಳಸಿಕೊಂಡು ವಿಶೇಷ ವ್ಯಕ್ತಿತ್ವ ರೂಪಿಸಿಕೊಳ್ಳಿ” ಎಂದರು.

ಸಾಹಿತ್ಯ ಮತ್ತು ಕಲಾಸಂಘದಿಂದ ಆಯಿಷತ್ ಸಂಶಿಯ, ಹಿಂದಿ ಸಂಘದಿಂದ ತ್ರಿಷಾ ಜೈನ್, ಗಣಿತ ಸಂಘದಿಂದ ರಕ್ಷಾ ಎನ್, ವಿಜ್ಞಾನ ಸಂಘದಿಂದ ಅಂಕಿತಾ,ತುಳು ಸಂಘದಿಂದ ರಕ್ಷಾ ಕೆ, ಕ್ರೀಡಾ ಸಂಘದಿಂದ ಸಮ್ಯಕ್, ಇಂಟರ್ ರ್ಯಾಕ್ಟ ಕ್ಲಬ್ ನಿಂದ ನೇತ್ರಾವತಿ ವಾರ್ಷಿಕ ಚಟುವಟಿಕೆಗಳನ್ನು ಮಂಡಿಸಿದರು . ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಸುಮನ್ ಯು.ಎಸ್ ಸಂಘಟಿಸಿದರು.

ವಿದ್ಯಾರ್ಥಿಗಳಾದ ಅಶ್ವಿನಿ ಸ್ವಾಗತಿಸಿ ,ಮುರ್ಷಿದ ವಂದಿಸಿದರು. ಸೃಷ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!