ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ 2025-26ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳ ಉದ್ಘಾಟನೆ ಜೂ.28 ರಂದು ನಡೆಯಿತು.

ಪೆರಿಂಜೆ ಶ್ರಿ ಧ.ಮಂ.ಅನುದಾನಿತ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಮುಕುಂದಚಂದ್ರ ಎಲ್.ಎನ್ ಅವರು ಉದ್ಘಾಟನೆ ನೆರವೇರಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, “ಸಂಘದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಒಳ್ಳೆಯ ಅನುಭವ ಪಡೆದುಕೊಳ್ಳಬಹುದು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ “ಅವಕಾಶ ಬಳಸಿಕೊಂಡು ವಿಶೇಷ ವ್ಯಕ್ತಿತ್ವ ರೂಪಿಸಿಕೊಳ್ಳಿ” ಎಂದರು.

ಸಾಹಿತ್ಯ ಮತ್ತು ಕಲಾಸಂಘದಿಂದ ಆಯಿಷತ್ ಸಂಶಿಯ, ಹಿಂದಿ ಸಂಘದಿಂದ ತ್ರಿಷಾ ಜೈನ್, ಗಣಿತ ಸಂಘದಿಂದ ರಕ್ಷಾ ಎನ್, ವಿಜ್ಞಾನ ಸಂಘದಿಂದ ಅಂಕಿತಾ,ತುಳು ಸಂಘದಿಂದ ರಕ್ಷಾ ಕೆ, ಕ್ರೀಡಾ ಸಂಘದಿಂದ ಸಮ್ಯಕ್, ಇಂಟರ್ ರ್ಯಾಕ್ಟ ಕ್ಲಬ್ ನಿಂದ ನೇತ್ರಾವತಿ ವಾರ್ಷಿಕ ಚಟುವಟಿಕೆಗಳನ್ನು ಮಂಡಿಸಿದರು . ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಸುಮನ್ ಯು.ಎಸ್ ಸಂಘಟಿಸಿದರು.

ವಿದ್ಯಾರ್ಥಿಗಳಾದ ಅಶ್ವಿನಿ ಸ್ವಾಗತಿಸಿ ,ಮುರ್ಷಿದ ವಂದಿಸಿದರು. ಸೃಷ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya

ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧಕ , ಯುವ ವಿಜ್ಞಾನಿ ದೀಪಕ್ ಸಂಶೋಧನಾ ಪಯಣದ ಕೆಲಸಕ್ಕೆ ಸುಧಾ ಮೂರ್ತಿರವರಿಂದ ಶ್ಲಾಘನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ಸಿಯೋನ್ ಆಶ್ರಮದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya
error: Content is protected !!