September 6, 2026
Uncategorized

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

ಬೆಳ್ತಂಗಡಿ: ಈಕೆ ರೀಲ್ಸ್‌ ತಾರೆ, ಮೈಕ್ ಹಿಡಿದರೆ ಗಾನ ಕೋಗಿಲೆ, ಕ್ಯಾಮಾರಕ್ಕೆ ಫೋಸ್ ನೀಡುವ ಈ ಚೆಲುವೆ ಇದೀಗ ಸೀರಿಯಲ್ ಬೆಡಗಿ. ಹೌದು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಂದಗೋಕುಲ ‘ಧಾರಾವಾಹಿಯಲ್ಲಿ ನಂದನ ಕಿರಿಯ ಮಗಳಾದ ರಕ್ಷಾ ಪಾತ್ರಧಾರಿ ಕೃಷ್ಣಪ್ರಿಯಾ ಭಟ್ ಮೂಲತಃ ಬೆಳ್ತಂಗಡಿ ತಾಲೂಕಿನ ನಾರಾವಿಯವರು.

ರೀಲ್ಸ್‌ ಮಾಡಿ ಎಡವಟ್ಟು ಮಾಡಿಕೊಂಡವರನ್ನು ಎಷ್ಟೋ ಮಂದಿಯನ್ನು ನೋಡಿದ್ದೇವೆ. ಆದರೆ ರೀಲ್ಸ್‌ ಮಾಡುವುದೇ ಇತ್ತಿಚೀನ ದಿನಗಳಲ್ಲಿ ಕೆಲವರಿಗೆ ಹವ್ಯಾಸ ಹಾಗೂ ರೂಢಿಯಾಗಿದೆ. ಕೃಷ್ಣಪ್ರಿಯಾ ಭಟ್ ರೀಲ್ಸ್‌ ಮಾಡುವ ಹವ್ಯಾಸ ಹೊಂದಿದ್ದರು. ಆ ಹವ್ಯಾಸ ಇಂದು ಅವರನ್ನು ಕಿರುತೆರಗೆ ಪರಿಚಯಿಸಿದೆ. ತಾವು ಮಾಡುತ್ತಿರುವ ರೀಲ್ಸ್‌ಗಳನ್ನು ಕಂಡ ಕಲರ್ಸ್ ಕನ್ನಡ ವಾಹಿನಿಯಿಂದ ನೇರವಾಗಿ ಅವರಿಗೆ ಕರೆ ಬಂದು, ಮೊಬೈಲ್ ಮೂಲಕ ಅಡೀಷನ್ ಮಾಡಿ ಅದರಲ್ಲಿ ಆಯ್ಕೆಯಾಗಿ ನಂದಗೋಕುಲ ತಂಡಕ್ಕೆ ಹಾಗೂ ಕಿರುತೆರೆಗೆ ಪಾದರ್ಪಣೆ ಮಾಡಿದರು.

ನಂದಗೋಕುಲ ‘ಧಾರವಾಹಿ ಒಂದು ತಿಂಗಳಿನಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸರವಾಗುತ್ತಿದ್ದು ಜನಮನಗಳಿಸುತ್ತಿದೆ. ನಂದನ ಮಗಳಾಗಿ ಕಾಣಿಸಿಕೊಂಡಿರುವ ಕೃಷ್ಣಪ್ರಿಯಾ ಭಟ್ ಪ್ರೇಕ್ಷಕರ ಪ್ರೀತಿಗಳಿಸುತ್ತಿದ್ದಾರೆ. ಈಕೆ ನಮ್ಮೂರಿನ ಹೆಮ್ಮೆಯ ಪ್ರತಿಭೆಯಾಗಿದ್ದು ಇವರ ಬಗ್ಗೆ ಸಂಪೂರ್ಣ ವಿಶೇಷ ವರದಿ ಸುದ್ದಿ ಉದಯ ವಾರಪತ್ರಿಕೆಯಲ್ಲಿ ಗುರುವಾರ ಪ್ರಕಟಗೊಳ್ಳಲಿದ್ದು ಅಲ್ಲಿಯವರೆಗೆ ನೀರಿಕ್ಷಿಸಿ…

Related posts

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

Suddi Udaya

ಅಂಡೆತಡ್ಕ ಸರಕಾರಿ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಕುವೆಟ್ಟು ಸ.ಉ. ಹಿ. ಪ್ರಾ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸತತವಾಗಿ ಮೂರನೇ ಬಾರಿ ದ್ವಿತೀಯ ಸ್ಥಾನ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ – ಡಿ .ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ: ‌ಸುದ್ದಿ ಉದಯ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರ ವ್ಯಾಪಕ ಮೆಚ್ಚುಗೆ

Suddi Udaya

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

Suddi Udaya

ಕುಮಟಾದಲ್ಲಿ ಶ್ರೀ ಮಹಾಮಂಡಲೇಶ್ವರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚರಣೆ:ಶಾಸಕ ಹರೀಶ್ ಪೂಂಜ ಸಹಿತ ಬೆಳ್ತಂಗಡಿಯಿಂದ ಹಲವು ಗಣ್ಯರು ಭಾಗಿ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya
error: Content is protected !!