23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

ಬೆಳ್ತಂಗಡಿ: ಈಕೆ ರೀಲ್ಸ್‌ ತಾರೆ, ಮೈಕ್ ಹಿಡಿದರೆ ಗಾನ ಕೋಗಿಲೆ, ಕ್ಯಾಮಾರಕ್ಕೆ ಫೋಸ್ ನೀಡುವ ಈ ಚೆಲುವೆ ಇದೀಗ ಸೀರಿಯಲ್ ಬೆಡಗಿ. ಹೌದು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ನಂದಗೋಕುಲ ‘ಧಾರಾವಾಹಿಯಲ್ಲಿ ನಂದನ ಕಿರಿಯ ಮಗಳಾದ ರಕ್ಷಾ ಪಾತ್ರಧಾರಿ ಕೃಷ್ಣಪ್ರಿಯಾ ಭಟ್ ಮೂಲತಃ ಬೆಳ್ತಂಗಡಿ ತಾಲೂಕಿನ ನಾರಾವಿಯವರು.

ರೀಲ್ಸ್‌ ಮಾಡಿ ಎಡವಟ್ಟು ಮಾಡಿಕೊಂಡವರನ್ನು ಎಷ್ಟೋ ಮಂದಿಯನ್ನು ನೋಡಿದ್ದೇವೆ. ಆದರೆ ರೀಲ್ಸ್‌ ಮಾಡುವುದೇ ಇತ್ತಿಚೀನ ದಿನಗಳಲ್ಲಿ ಕೆಲವರಿಗೆ ಹವ್ಯಾಸ ಹಾಗೂ ರೂಢಿಯಾಗಿದೆ. ಕೃಷ್ಣಪ್ರಿಯಾ ಭಟ್ ರೀಲ್ಸ್‌ ಮಾಡುವ ಹವ್ಯಾಸ ಹೊಂದಿದ್ದರು. ಆ ಹವ್ಯಾಸ ಇಂದು ಅವರನ್ನು ಕಿರುತೆರಗೆ ಪರಿಚಯಿಸಿದೆ. ತಾವು ಮಾಡುತ್ತಿರುವ ರೀಲ್ಸ್‌ಗಳನ್ನು ಕಂಡ ಕಲರ್ಸ್ ಕನ್ನಡ ವಾಹಿನಿಯಿಂದ ನೇರವಾಗಿ ಅವರಿಗೆ ಕರೆ ಬಂದು, ಮೊಬೈಲ್ ಮೂಲಕ ಅಡೀಷನ್ ಮಾಡಿ ಅದರಲ್ಲಿ ಆಯ್ಕೆಯಾಗಿ ನಂದಗೋಕುಲ ತಂಡಕ್ಕೆ ಹಾಗೂ ಕಿರುತೆರೆಗೆ ಪಾದರ್ಪಣೆ ಮಾಡಿದರು.

ನಂದಗೋಕುಲ ‘ಧಾರವಾಹಿ ಒಂದು ತಿಂಗಳಿನಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸರವಾಗುತ್ತಿದ್ದು ಜನಮನಗಳಿಸುತ್ತಿದೆ. ನಂದನ ಮಗಳಾಗಿ ಕಾಣಿಸಿಕೊಂಡಿರುವ ಕೃಷ್ಣಪ್ರಿಯಾ ಭಟ್ ಪ್ರೇಕ್ಷಕರ ಪ್ರೀತಿಗಳಿಸುತ್ತಿದ್ದಾರೆ. ಈಕೆ ನಮ್ಮೂರಿನ ಹೆಮ್ಮೆಯ ಪ್ರತಿಭೆಯಾಗಿದ್ದು ಇವರ ಬಗ್ಗೆ ಸಂಪೂರ್ಣ ವಿಶೇಷ ವರದಿ ಸುದ್ದಿ ಉದಯ ವಾರಪತ್ರಿಕೆಯಲ್ಲಿ ಗುರುವಾರ ಪ್ರಕಟಗೊಳ್ಳಲಿದ್ದು ಅಲ್ಲಿಯವರೆಗೆ ನೀರಿಕ್ಷಿಸಿ…

Related posts

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!