26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

ಉಜಿರೆ: ‘ ಭಿತ್ತಿ ಪತ್ರಿಕೆ ಆಕರ್ಷಕವಾಗಿ ಕಾಣಬೇಕಾದರೆ ಅದರಲ್ಲಿ ಸೃಜನಾತ್ಮಕತೆ ಇರಬೇಕು ಮತ್ತು ವೈಶಿಷ್ಟ್ಯಪೂರ್ಣವಾದ ಮಾಹಿತಿಯನ್ನು ಒಳಗೊಂಡಿರಬೇಕು. ವಿದ್ಯಾರ್ಥಿಗಳ ಕೌಶಲ್ಯ ಅರಿಯಲು ಇದೊಂದು ಸಾಧನವಾಗಿದೆ ‘ ಎಂದು ಉಜಿರೆಯ ಶ್ರೀ ಧ. ಮಂ. ಕಾಲೇಜು ( ಸ್ವಾಯತ್ತ ) ಇಲ್ಲಿನ ಬಿ.ವೋಕ್, ಪೂರೈಕೆ ಸರಪಳಿ ನಿರ್ವಹಣೆ ವಿಭಾಗದ ಮುಖ್ಯಸ್ಥ ಅಶ್ವಿತ್ ಹೆಚ್ ಆರ್ ಅವರು ಹೇಳಿದರು..

ಅವರು ಉಜಿರೆಯ ಶ್ರೀ ಧ. ಮಂ. ಪದವಿ ಪೂರ್ವಕಾಲೇಜಿನ ಎಲ್ಲ ವಿಭಾಗಗಳ ಹಾಗೂ ಕ್ಲಬ್ ಗಳ ಭಿತ್ತಿಪತ್ರಿಕೆಗಳನ್ನು ಅನಾವರಣಗೊಳಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾದ, ಮಾಹಿತಿಪೂರ್ಣವಾದ ಸಂಗತಿಗಳನ್ನು ಮತ್ತು ಸಾಧಕರ ವಿಷಯಗಳನ್ನು ಪ್ರಸ್ತುತಪಡಿಸಿದರು.

ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ. ಇವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಉಳಿದವರಿಗಿಂತ ಭಿನ್ನವಾಗಿ ಮಾಡುವ ಸೃಜನಾತ್ಮಕ ಕಾರ್ಯಗಳು ಯಾವತ್ತೂ ಹೆಚ್ಚಿನ ಯಶಸ್ಸನ್ನು ಪಡೆಯುತ್ತವೆ ಎಂದು ಸಾಧಕರ ಉದಾಹರಣೆ ಸಹಿತ ತಿಳಿಸಿದರು.

ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ ಹಾಗೂ ಕಾರ್ಯಕಾರಿ ಸಮಿತಿ ಮುಖ್ಯಸ್ಥೆ ಶ್ರೀಮತಿ ಬೇಬಿ ಎನ್., ಸದಸ್ಯರಾದ ಸವಿತಾ ಎಸ್., ಮನೋಹರ್ ಶೆಟ್ಟಿ, ಸ್ಮಿತಾ ಬೇಡೇಕರ್, ಮಹಾವೀರ್ ಜೈನ್, ಸುಪ್ರೀತಾ ಪಡಿವಾಳ್ ಹಾಗೂ ಪ್ರಾಧ್ಯಾಪಕ ವೃಂದ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಹಂಸಿನಿ ಭಿಡೆ ಕಾರ್ಯಕ್ರಮ ನಿರೂಪಿಸಿ, ಪರಿಚಯ ಮಾಡಿದರು. ನಿಜ ಕುಲಾಲ್ ಸ್ವಾಗತಿಸಿ , ಧನ್ಯವಾದ ಅರ್ಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!