25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

ಬೆಳ್ತಂಗಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದವನ ಮೇಲೆ ಸೋಡಾ ಬಾಟಲ್ ಎಸೆದು ಕೊಲೆಗೆ ಯತ್ನಸಿದ ಪ್ರಕರಣದ ಆರೋಪದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.27 ರಂದು ಹಲ್ಲೆಗೊಳಗಾದ ಮಹಮ್ಮದ್ ತೌಸಿಫ್ ಸ್ನೇಹಿತ ನೀಡಿದ ದೂರಿನ ಮೇರೆಗೆ ರಹೀಂ ಮತ್ತು ಮಹಮ್ಮದ್ ಫೈಯಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣ ಸಂಬಂಧ ಮುನೀರ್ ಮತ್ತು ತೌಸಿಫ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.28 ರಂದು ರಹೀಂ ನೀಡಿದ ದೂರಿನ ಮೇರೆಗೆ BNS 2023 (U/s-115(2),118(1),351(2), r/w 3(5)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ‌.

Oplus_131072

*ಪ್ರಕರಣ: ರಹೀಂ ಲಾರಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು ಜೂ. 27 ರಂದು ರಹೀಂ ಮತ್ತು ಮಹಮ್ಮದ್ ಫಯಾಜ್ ರವರು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಎಂಬಲ್ಲಿ ಮನ್ಸೂರ್ ಎಂಬವರ ಅಂಗಡಿ ಬಳಿ ನಿಂತುಕೊಂಡಿದ್ದಾಗ ಸಮಯ ಮಧ್ಯಾಹ್ನ 3 ಗಂಟೆಗೆ ರಿಡ್ಜ್ ಕಾರಿನಲ್ಲಿ ಮುನೀರ್ ಮತ್ತು ತೌಸಿಫ್ ರವರು ಬಂದು ಕಾರಿನಿಂದ ಇಳಿದು ಹಣದ ವ್ಯವಹಾರ ವಿಚಾರವಾಗಿ ಹಣವನ್ನು ಯಾವಾಗ ಕೊಡುತ್ತಿಯ ಎಂದು ಹೇಳಿ ತೌಸಿಫ್ ಎಂಬಾತನು ರಹೀಂಗೆ ಕೈಯಿಂದ ಬೆನ್ನಿಗೆ, ಮುಖಕ್ಕೆ ಹೊಡೆದಿರುತ್ತಾನೆ, ಆ ಸಮಯ ಮಹಮ್ಮದ್ ಫಯಾಜ್ ನು ತೌಸಿಫ್ ನನ್ನು ಹಿಡಿದುಕೊಂಡು ಹೊಡೆಯಬೇಡ ಎಂದು ಹೇಳುತ್ತಿರುವ ಸಮಯ ಮುನೀರ್ ಎಂಬಾತನು ರಾಡ್ ನಿಂದ ರಹೀಂ ತಲೆಯ ಹಣೆಗೆ ಹೊಡೆದು ರಕ್ತ ಗಾಯವಾಗಿರುತ್ತದೆ. ನಂತರ ಮುನೀರ್ ನು ಕೈಯಿಂದ ರಹೀಂ ಬೆನ್ನಿಗೆ ಗುದ್ದಿ ನೋವಾಗಿದ್ದು, ನಂತರ ಮಹಮ್ಮದ್ ಫಯಾಜ್ ನಿಗೆ ಮುನೀರ್ ಮತ್ತು ತೌಸಿಫ್ ಕೈಯಿಂದ ಬೆನ್ನಿಗೆ ಹೊಡೆದು ನೋವುಂಟು ಮಾಡಿರುತ್ತಾರೆ. ನಂತರ ಅಲ್ಲಿ ಜನರು ಸೇರಿದ್ದು ಅಲ್ಲಿಂದ ರಹೀಂ ಮತ್ತು ಫಯಾಜ್ ರವರು ಹೋಗುವಾಗ ಮುನೀರ್ ಮತ್ತು ತೌಸಿಫ್ ನು ರಹೀಂ ಉದ್ದೇಶಿಸಿ “ನಿನಗೆ ಒಂದು ಗತಿ ಕಾಣಿಸುತ್ತೇನೆ” ಎಂದು ಜೀವ ಬೆದರಿಕೆ ಹಾಕಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Related posts

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮದ ವಿಷಯದ ಕುರಿತು ಉಪನ್ಯಾಸ

Suddi Udaya
error: Content is protected !!