July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

ಬೆಳ್ತಂಗಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದವನ ಮೇಲೆ ಸೋಡಾ ಬಾಟಲ್ ಎಸೆದು ಕೊಲೆಗೆ ಯತ್ನಸಿದ ಪ್ರಕರಣದ ಆರೋಪದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.27 ರಂದು ಹಲ್ಲೆಗೊಳಗಾದ ಮಹಮ್ಮದ್ ತೌಸಿಫ್ ಸ್ನೇಹಿತ ನೀಡಿದ ದೂರಿನ ಮೇರೆಗೆ ರಹೀಂ ಮತ್ತು ಮಹಮ್ಮದ್ ಫೈಯಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣ ಸಂಬಂಧ ಮುನೀರ್ ಮತ್ತು ತೌಸಿಫ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.28 ರಂದು ರಹೀಂ ನೀಡಿದ ದೂರಿನ ಮೇರೆಗೆ BNS 2023 (U/s-115(2),118(1),351(2), r/w 3(5)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ‌.

Oplus_131072

*ಪ್ರಕರಣ: ರಹೀಂ ಲಾರಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು ಜೂ. 27 ರಂದು ರಹೀಂ ಮತ್ತು ಮಹಮ್ಮದ್ ಫಯಾಜ್ ರವರು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಎಂಬಲ್ಲಿ ಮನ್ಸೂರ್ ಎಂಬವರ ಅಂಗಡಿ ಬಳಿ ನಿಂತುಕೊಂಡಿದ್ದಾಗ ಸಮಯ ಮಧ್ಯಾಹ್ನ 3 ಗಂಟೆಗೆ ರಿಡ್ಜ್ ಕಾರಿನಲ್ಲಿ ಮುನೀರ್ ಮತ್ತು ತೌಸಿಫ್ ರವರು ಬಂದು ಕಾರಿನಿಂದ ಇಳಿದು ಹಣದ ವ್ಯವಹಾರ ವಿಚಾರವಾಗಿ ಹಣವನ್ನು ಯಾವಾಗ ಕೊಡುತ್ತಿಯ ಎಂದು ಹೇಳಿ ತೌಸಿಫ್ ಎಂಬಾತನು ರಹೀಂಗೆ ಕೈಯಿಂದ ಬೆನ್ನಿಗೆ, ಮುಖಕ್ಕೆ ಹೊಡೆದಿರುತ್ತಾನೆ, ಆ ಸಮಯ ಮಹಮ್ಮದ್ ಫಯಾಜ್ ನು ತೌಸಿಫ್ ನನ್ನು ಹಿಡಿದುಕೊಂಡು ಹೊಡೆಯಬೇಡ ಎಂದು ಹೇಳುತ್ತಿರುವ ಸಮಯ ಮುನೀರ್ ಎಂಬಾತನು ರಾಡ್ ನಿಂದ ರಹೀಂ ತಲೆಯ ಹಣೆಗೆ ಹೊಡೆದು ರಕ್ತ ಗಾಯವಾಗಿರುತ್ತದೆ. ನಂತರ ಮುನೀರ್ ನು ಕೈಯಿಂದ ರಹೀಂ ಬೆನ್ನಿಗೆ ಗುದ್ದಿ ನೋವಾಗಿದ್ದು, ನಂತರ ಮಹಮ್ಮದ್ ಫಯಾಜ್ ನಿಗೆ ಮುನೀರ್ ಮತ್ತು ತೌಸಿಫ್ ಕೈಯಿಂದ ಬೆನ್ನಿಗೆ ಹೊಡೆದು ನೋವುಂಟು ಮಾಡಿರುತ್ತಾರೆ. ನಂತರ ಅಲ್ಲಿ ಜನರು ಸೇರಿದ್ದು ಅಲ್ಲಿಂದ ರಹೀಂ ಮತ್ತು ಫಯಾಜ್ ರವರು ಹೋಗುವಾಗ ಮುನೀರ್ ಮತ್ತು ತೌಸಿಫ್ ನು ರಹೀಂ ಉದ್ದೇಶಿಸಿ “ನಿನಗೆ ಒಂದು ಗತಿ ಕಾಣಿಸುತ್ತೇನೆ” ಎಂದು ಜೀವ ಬೆದರಿಕೆ ಹಾಕಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Related posts

ಭಾರಿ ಗಾಳಿ ಮಳೆ: ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಹಾರಿ ಹೋದ ಮನೆಯ ಶೀಟು

Suddi Udaya

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya
error: Content is protected !!