ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಉಜಿರೆ: ಜಗತ್ತಿನಲ್ಲಿ ಭಾಷೆ ಇಲ್ಲದಿದ್ದರೆ ಅಂಧಕಾರ ಕವಿಯುತ್ತಿತ್ತು ಎನ್ನುವುದು ಒಂದು ಕವಿವಾಣಿ. ಸಕಲ ಜನರ ಸಂವಹನಕ್ಕೆ , ವ್ಯವಹಾರಕ್ಕೆ ಭಾಷೆಯು ಅನಿವಾರ್ಯವಾಗಿದೆ. ಇಂತಹ ಭಾಷೆಗಳಲ್ಲಿ ಸಂಸ್ಕೃತವೂ ಒಂದು. ಸಾಹಿತ್ಯ ಸಂಪತ್ತಿನೊಂದಿಗೆ ಭಾರತೀಯ ವಿಜ್ಞಾನದ ಮೂಲ ಜ್ಞಾನವನ್ನು ಸಂಸ್ಕೃತಜ್ಞರು ನೀಡಿದ್ದಾರೆ. ಪ್ರಾಚೀನ ಸಾಹಿತ್ಯ ಹಾಗೂ ಸಂಸ್ಕೃತಿಯು ಉಳಿವಿಗೆ ಸಂಸ್ಕೃತ ಅಧ್ಯಯನ ಅಗತ್ಯವಾಗಿದೆ. ಒಟ್ಟಾರೆ ವಿಪುಲವಾದ ಜ್ಞಾನ ಸಂಪತ್ತು ಸಂಸ್ಕೃತ ಭಾಷೆಯಲ್ಲಿದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸನಿವಾಸ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ಉಪನ್ಯಾಸಕ ಮಹೇಶ್ ಎಸ್.ಎಸ್ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭದ ಅಭ್ಯಾಗರಾಗಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ. ರಾಜೇಶ್ ಬಿ. ಅವರು ಮಾತನಾಡಿ ಸಂಸ್ಕೃತವು ಶ್ರೀಮಂತ ಭಾಷೆಯಾಗಿದ್ದು, ಇದರ ಅದ್ಭುತವಾದ ಜ್ಞಾನ ಭಂಡಾರ ಎಲ್ಲರಿಗೂ ಸಿಗಲಿ. ಇಂತಹ ಸಂಘಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಕರೆನೀಡಿದರು.

‘ ಸುಬೋಧಿನೀ ‘ ಸಂಸ್ಕೃತ ಡಿಜಿಟಲ್ ಭಿತ್ತಿಪತ್ರಿಕೆಯನ್ನು ಉಪ ಪ್ರಾಚಾರ್ಯರು ಅನಾವರಣ ಮಾಡಿದರು. ಹತ್ತನೆಯ ತರಗತಿಯ ಸಂಸ್ಕೃತ ಭಾಷಾ ಪರೀಕ್ಷೆಯಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಳೆದ ವರ್ಷದ ದ್ವಿತೀಯ ಪಿಯುಸಿಯ ಸಂಸ್ಕೃತ ವಿದ್ಯಾರ್ಥಿಗಳು ಸಂಗ್ರಹಿಸಿದ ಸಂಸ್ಕೃತ ಪುಸ್ತಕಗಳನ್ನು ಸಂಸ್ಕೃತ ಸಂಘದ ಅಧ್ಯಕ್ಷನಾಗಿದ್ದ ಗುರುದತ್ತ ಮರಾಠೆ ಇವರು ಸಂಸ್ಕೃತ ವಿಭಾಗದ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಹಸ್ತಾಂತರಿಸಿದರು.
ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಇವರು ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಅನೀಕಾ ತಂಡನವರು ಸಂಸ್ಕೃತ ಗೀತಗಾಯನ ಪ್ರಸ್ತುತಪಡಿಸಿದರು. ಸಂಸ್ಕೃತ ಸಂಘದ ಅಧ್ಯಕ್ಷೆ ಹಂಸಿನಿ ಭಿಡೆ ಸ್ವಾಗತಿಸಿದರು . ಉಪಾಧ್ಯಕ್ಷ ಯಶಸ್ವಿ ಸಂಸ್ಕೃತ ಸಾಧಕರ ಪಟ್ಟಿ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಸನ್ನಾ ವಂದಿಸಿದರು.

Related posts

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya
error: Content is protected !!