23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಕಲ್ಮಂಜ: ಇಲ್ಲಿಯ ಶ್ರೀ ಸತ್ಯನಾರಾಯಣ ಮಕ್ಕಳ ಯಕ್ಷಗಾನ ತರಬೇತಿ ಕೇಂದ್ರದ ಮೂವತ್ತು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಜೂ.28ರಂದು ಕಲ್ಮಂಜ ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಲ್ಲಿ ಜರುಗಿತು.

ಯಕ್ಷಗಾನ ತರಬೇತಿ ಕೇಂದ್ರದ ಸಂಚಾಲಕ ಶೇಖರ್ ಟಿ. ಸಮವಸ್ತ್ರ ವಿತರಿಸಿ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಯಕ್ಷಗಾನ ಕಲಿಕೆಯು ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಪ್ರಜ್ಞೆ ಪುರಾಣೇತಿಹಾಸದ ತಿಳುವಳಿಕೆ, ಕಲಾಸಕ್ತಿ, ನೃತ್ಯ-ನಟನಾ ಕೌಶಲ, ವಾಕ್ಚಾತುರ್ಯ, ರಂಗಾಭಿನಯ ಪಾಂಡಿತ್ಯ, ಸಂಸ್ಕೃತಿ-ಸಂಸ್ಕಾರದ ಅರಿವು, ಸ್ವಯಂಶಿಸ್ತು, ಮನೋಸ್ಥೆರ್ಯ, ಜೊತೆಗೆ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಹಾಗೂ ಪರಿಪಕ್ವ ಬೆಳವಣಿಗೆಗೆ ಪೂರಕವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯಕ್ಷಗಾನ ಗುರುಗಳಾದ ಅರುಣ್ ಕುಮಾರ್ ಧರ್ಮಸ್ಥಳ, ಕೆ. ನಾಗೇಶ್ ಆಚಾರ್ಯ, ಕೃಷ್ಣಪ್ಪ ಟೈಲರ್ ನಿಡಿಗಲ್ ಮಜಲ್, ಚಿದಾನಂದ ಅಕ್ಷಯ ನಗರ, ಮಣಿಲಾ ಮುಖೇಶ್, ವಸಂತ ಟೈಲರ್ ನಿಡಿಗಲ್ ಮಜಲ್ ಹಾಗೂ ಪೋಷಕರು ಉಪಸ್ಥಿತರಿದ್ದರು.

ಕಳೆದ ಮೂರು ವರ್ಷಗಳ ಹಿಂದೆ ಶೇಖರ್ ಟಿ. ರವರ ನೇತೃತ್ವದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿಯು ಉಚಿತವಾಗಿದ್ದು ಪ್ರತೀ ಆದಿತ್ಯವಾರ ಬೆಳಿಗ್ಗೆ 8:30ರಿಂದ 10ರ ತನಕ ನಡೆಯುತ್ತದೆ.

Related posts

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!