March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿ.ಸಿ. ರೋಡ್ ಸಮೀಪದ ಅಜ್ಜಿಬೆಟ್ಟು ಎಂಬಲ್ಲಿ ಜೂ.30 ರಂದು ನಡೆದಿದೆ.

ಮೃತ ವ್ಯಕ್ತಿಯನ್ನು ಶಂಭೂರು ಕೊಪ್ಪಳ ನಿವಾಸಿ ಚಿದಾನಂದ( 50) ಎಂದು ಗುರುತಿಸಲಾಗಿದೆ.

ದ್ವಿಚಕ್ರ ಸವಾರ ಚಿದಾನಂದ ಅವರು ಬಿಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಎಂಬಲ್ಲಿ ರಸ್ತೆ ಕ್ರಾಸ್ ಮಾಡುವ ವೇಳೆ. ಬಿಸಿರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಢಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಚಿದಾನಂದ ಅವರು ಬಂಟ್ವಾಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya
error: Content is protected !!