July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಹಾಗೂ ಎಸ್ ಡಿಎಮ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಜೂ.30 ರಂದು ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ ನೆರವೇರಿಸಿ ಕಾನೂನಿನ ಬಗ್ಗೆ ತಿಳಿದುಕೊಂಡರೆ ನಮಗೆ ಸಿಗಬೇಕಾದ ಹಕ್ಕನ್ನು ನಾವು ಪಡೆದುಕೊಳ್ಳಲು ಸಾಧ್ಯ. ಕಾನೂನಿನ ಬಗ್ಗೆ ತಿಳಿದು ನಿಮ್ಮ ಹಿರಿಯರಿಗೆ ಕಿರಿಯರಿಗೆ ಹೇಳಿದರೆ ಈ ಕಾರ್ಯಕ್ರಮವು ಸಾರ್ಥಕತೆಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜೀತಿನ್ ಜೆಜೋ ವಕೀಲರ ಬೆಳ್ತಂಗಡಿ ಇವರು ಬಾಲಕಾರ್ಮಿಕರೆಂದರೆ ಯಾರು? ಬಾಲ ಕಾರ್ಮಿಕರ ಹಕ್ಕುಗಳ ಬಗ್ಗೆ ಮತ್ತು ಮಕ್ಕಳು ಮತ್ತು ಹದಿ ಹರೆಯದವರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಯ ಬಗ್ಗೆ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ವಸಂತ ಮರಕಡ , ಬೆಳ್ತಂಗಡಿ ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಉಪಸ್ಥಿತರಿದ್ದರು. ಪ್ರಭಾರ ಮುಖ್ಯೋಪಾಧ್ಯಾಯನಿ ಜೆಸಿಂತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿಯಾದ ಶ್ರೀಮತಿ ಪ್ರವೀಣಾ ಕಾಮತ್ ಸ್ವಾಗತಿಸಿ, ಶಿಕ್ಷಕಿ ಅಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya
error: Content is protected !!