25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

ಬೆಳ್ತಂಗಡಿ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ ಜೂ. 28ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಉಜಿರೆ ಎಸ್‌.ಡಿ.ಎಂ ಸ್ನಾತಕೋತ್ತರ ಪದವಿ ಕಾಲೇಜಿನ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅಕ್ಷತಾ.ಕೆ ರವರು ಯುವ ಮನಸ್ಸುಗಳನ್ನು ಪೋಷಕರು ಮತ್ತು ಶಿಕ್ಷಕರು ಹೇಗೆ ಪೋಷಿಸಬೇಕು, ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರದ ಬಗ್ಗೆ ವಿಸ್ತಾರವಾಗಿ ತಿಳಿಸಿದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಧನ್ಯ ಕುಮಾರ್ ರವರು ಮಾತನಾಡಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳು ಆಧುನಿಕ ಕಲಿಕೊಪಕರಣಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಸುಧಾರಿಸುವ ಜೊತೆಗೆ ಮೌಲ್ಯದ ಶಿಕ್ಷಣವನ್ನು ನೀಡುತ್ತಿದೆ ಎಂಬುದನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ. ಆರ್. ರವರು ವಿದ್ಯಾರ್ಥಿಗಳು ಪಾಲಿಸಬೇಕಾದ ಶಾಲಾ ನಿಯಮಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪೋಷಕರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

Suddi Udaya

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya
error: Content is protected !!