July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಮರಳು, ಕೆಂಪುಕಲ್ಲು , ಬೋಲ್ಡ್ರಸ್ ಕಲ್ಲು ಗಳಿಗೆ ನಿರ್ಬಂಧ ಹೇರಿರುವ ಕಾರಣ ದುಬಾರಿ ಮೊತ್ತ ಪಾವತಿಸಬೇಕಾಗಿದೆ. ಇದರಿಂದಾಗಿ ಜನ ಸಾಮಾನ್ಯರು, ಮಧ್ಯಮ ವರ್ಗದವರು, ಕಟ್ಟಡ ಅಥವಾ ಯಾವುದೇ ಒಂದು ಮನೆ ಮಾಡಲು ಅಸಾಧ್ಯವಾದ ವಾತವರಣ ದ.ಕ ಜಿಲ್ಲೆಯಲ್ಲಿ ನಿರ್ಮಾಣವಾಗಿದೆ. ಅದೇ ರೀತಿ ಇನ್ನಿತರ ಯಾವುದೇ ಕಟ್ಟಡ ಕಾಮಗಾರಿ , ರಸ್ತೆ ಕಾಂಕ್ರೀಟಿಕರಣ ಸೇರಿದಂತೆ ಅಭಿವೃದ್ಧಿ ಕೆಲಸಗಳಿಗೆ ಅಡಚಣೆ ಉಂಟಾಗಿ ಕಟ್ಟಡ ಕಾರ್ಮಿಕರಿಗೆ ಕೆಲಸವೇ ಇಲ್ಲದಂತಾಗಿದೆ. ಕಟ್ಟಡ ನಿರ್ಮಾಣದ ಕೆಲಸವನ್ನೇ ನಂಬಿಕೊಂಡು ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬ ಬದುಕುತ್ತಿದ್ದು , ಇದೀಗ ಅವರ ಬದುಕನ್ನು ರಾಜ್ಯ ಸರಕಾರ ಬೀದಿಗೆ ತಳ್ಳುತ್ತಿದ್ದು ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರವನ್ನು ಪ್ರಯೋಗ ಮಾಡಿದಂತಿದೆ.

ಕಟ್ಟಡ ಕಾರ್ಮಿಕರಿಗೆ ಕೆಲಸ ಸಿಗುವಂತೆ ಮಾಡುವಲ್ಲಿ ರಾಜ್ಯ ಸರಕಾರ ಮತ್ತು ಜಿಲ್ಲಾ ಆಡಳಿತ ಅಸಡ್ಡೆ ತೋರಿಸಿದಲ್ಲಿ ಮುಂದಿನ ದಿನ ಕಾರ್ಮಿಕರು ಬೀದಿಗಿಳಿದು ಸರಕಾರದ ವಿರುದ್ಧ ಹೋರಾಟ ಮಾಡಲು ಸರಕಾರವೇ ದಾರಿ ಮಾಡಿಕೊಟ್ಟಂತಿದೆ ಎಂದು ಸ್ಪಂದನ ದಕ್ಷಿಣ ಕನ್ನಡ ಕಟ್ಟಡ ಮತ್ತು ಇತರ ನಿರ್ಮಾಣ ಸಂಘದ ಜಿಲ್ಲಾಧ್ಯಕ್ಷ ವಸಂತ ನಡ ಎಚ್ಚರಿಕೆ ನೀಡಿದರು.

ಈ ಕೂಡಲೇ ಸಂಬಂಧ ಪಟ್ಟ ಜಿಲ್ಲಾ ಉಸ್ತುವಾರಿ ಸಚಿವರು, ಕಾರ್ಮಿಕ ಸಚಿವರು, ಜಿಲ್ಲಾಡಳಿತ ಮತ್ತು ಮುಖ್ಯಮಂತ್ರಿಯವರು ಮಧ್ಯಪ್ರವೇಶ ಮಾಡಿ ಪರಿಶೀಲನೆ ಮಾಡಿ ಮರಳು, ಕೆಂಪು ಕಲ್ಲು, ಬೋಲ್ಡ್ರಸ್ ಕಲ್ಲುಗಳು ಕಡಿಮೆ ಶುಲ್ಕದೊಂದಿಗೆ ದೊರೆಯುವಂತೆ ಮಾಡುವ ಜೊತೆಗೆ ಕಾನೂನು ಪ್ರಕಾರ ಎಲ್ಲಾ ರೀತಿಯ ಗಣಿಗಾರಿಕೆ ನಡೆಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರವನ್ನು ಅಗ್ರಹಿಸಿದ್ದಾರೆ.

Related posts

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ಮಠದಬೈಲು ಕಾಲು ಸಂಕ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಆಮಂತ್ರಣ ಮುದ್ದು ಕೃಷ್ಣ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!