25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

ವೇಣೂರು : ಯುವವಾಹಿನಿ ವೇಣೂರು ಘಟಕ, ಶ್ರೀ ಗು. ಸೇವಾ ಸಂಘ ಮೂಡುಕೋಡಿ, ಕಾಟಿ ಅಭಿಮಾನಿ ಬಳಗ ವೇಣೂರು ಮೂಡುಕೋಡಿ ಇದರ ವತಿಯಿಂದ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮವು ಜೂ. 28 ರಂದು ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಘಟಕದ ಅಧ್ಯಕ್ಷ ಶುಭಕರ್ ಪೂಜಾರಿ ಸಾವ್ಯಾ ವಹಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕೊಕ್ರಾಡಿ ಇಲ್ಲಿಯ ನಿವೃತ್ತ ಪ್ರಾಂಶುಪಾಲರು ಸಮಾಜ ಸೇವಕರು ನೋರ್ಬರ್ಟ್ ಮಾರ್ಟೀಸ್ ರವರನ್ನು ಸನ್ಮಾನಿಸಲಾಯಿತು.

ಘಟಕದ ಸೇವಾಯೋಜನೆಯನ್ನು ಅನಾರೋಗ್ಯದಿಂದ ಬಳಲುತ್ತಿರುವ ಮೂಡುಕೋಡಿ ನೆಲ್ಲಿಗುಡ್ಡೆ ಸುಂದರ ಪೂಜಾರಿ ದಂಪತಿಗಳಿಗೆ ನೀಡಲಾಯಿತು. ವೇದಿಕೆಯಲ್ಲಿ ಶ್ರೀ ಗು.ನಾ ಸ್ವಾ. ಸೇ ಸಂಘ ವೇಣೂರು ವಲಯದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ವಿನೋಧ ಕುಮಾರಿ, ಖ್ಯಾತ ಜೋತಿಷ್ಯರಾದ ಗಣೇಶ್ ನಾರಾಯಣ ಪಂಡಿತ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ , ಮೂಡುಕೋಡಿ ಬಿಲ್ಲವ ಸಂಘದ ಅಧ್ಯಕ್ಷ ರವಿ ಪೂಜಾರಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಅರುಣ್ ಕೋಟ್ಯಾನ್ ನಿರೂಪಿಸಿ, ಸಲಹೆಗಾರರು ರಾಕೇಶ್ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ ವಂದಿಸಿದರು.

Related posts

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ, ಧ್ವಜಾರೋಹಣ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಕ್ಕಳ, ಪಾರೆಂಕಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

Suddi Udaya
error: Content is protected !!