23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

ವೇಣೂರು : ಯುವವಾಹಿನಿ ವೇಣೂರು ಘಟಕ, ಶ್ರೀ ಗು. ಸೇವಾ ಸಂಘ ಮೂಡುಕೋಡಿ, ಕಾಟಿ ಅಭಿಮಾನಿ ಬಳಗ ವೇಣೂರು ಮೂಡುಕೋಡಿ ಇದರ ವತಿಯಿಂದ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮವು ಜೂ. 28 ರಂದು ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಘಟಕದ ಅಧ್ಯಕ್ಷ ಶುಭಕರ್ ಪೂಜಾರಿ ಸಾವ್ಯಾ ವಹಿಸಿದರು. ಕಾರ್ಯಕ್ರಮದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕೊಕ್ರಾಡಿ ಇಲ್ಲಿಯ ನಿವೃತ್ತ ಪ್ರಾಂಶುಪಾಲರು ಸಮಾಜ ಸೇವಕರು ನೋರ್ಬರ್ಟ್ ಮಾರ್ಟೀಸ್ ರವರನ್ನು ಸನ್ಮಾನಿಸಲಾಯಿತು.

ಘಟಕದ ಸೇವಾಯೋಜನೆಯನ್ನು ಅನಾರೋಗ್ಯದಿಂದ ಬಳಲುತ್ತಿರುವ ಮೂಡುಕೋಡಿ ನೆಲ್ಲಿಗುಡ್ಡೆ ಸುಂದರ ಪೂಜಾರಿ ದಂಪತಿಗಳಿಗೆ ನೀಡಲಾಯಿತು. ವೇದಿಕೆಯಲ್ಲಿ ಶ್ರೀ ಗು.ನಾ ಸ್ವಾ. ಸೇ ಸಂಘ ವೇಣೂರು ವಲಯದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ವಿನೋಧ ಕುಮಾರಿ, ಖ್ಯಾತ ಜೋತಿಷ್ಯರಾದ ಗಣೇಶ್ ನಾರಾಯಣ ಪಂಡಿತ್, ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಧನಂಜಯ , ಮೂಡುಕೋಡಿ ಬಿಲ್ಲವ ಸಂಘದ ಅಧ್ಯಕ್ಷ ರವಿ ಪೂಜಾರಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಅರುಣ್ ಕೋಟ್ಯಾನ್ ನಿರೂಪಿಸಿ, ಸಲಹೆಗಾರರು ರಾಕೇಶ್ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!