July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಎಲ್ಲಾ ಸಂಘಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ- ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರು – ⁠ಬಿ.ವೋಕ್ ಕಾರ್ಯಕ್ರಮಗಳ ಸಂಯೋಜಕರು – ⁠ತರಬೇತಿ ಮತ್ತು ಉದ್ಯೋಗ ಕೋಶದ ಸಂಯೋಜಕ ಡಾ. ಸುವೀರ್ ಜೈನ್ ಆಗಮಿಸಿದ್ದರು.

ಶಾಲಾ ಸಂಚಾಲಕರಾದ ಅಂತ ಪದ್ಮನಾಭ ಭಟ್ ಹಾಗೂ ಡಾ.ಸುವೀರ್ ಜೈನ್ ಅವರು ಜೊತೆಗೂಡಿ ದೀಪ ಪ್ರಜ್ವಲಿಸಿ ಸಂಘಗಳ ಉದ್ಘಾಟನೆಯನ್ನು ಮಾಡಿದರು. ಬಳಿಕ ಶಾಲೆಯ ವಿವಿಧ ಸಂಘಗಳು ತಮ್ಮ ವಾರ್ಷಿಕ ಯೋಜನೆಗಳನ್ನು ನಾಟಕ, ನೃತ್ಯ, ಕಥೆ, ಕವನ, ಹಾಡು ಇತ್ಯಾದಿ ವಿವಿಧ ಕಲಾಪ್ರಕಾರದ ರೂಪದಲ್ಲಿ ಪ್ರಸ್ತುತಪಡಿಸಿದರು.

ಅತಿಥಿಯಾಗಿ ಡಾ. ಸುವೀರ್ ಜೈನ್ ಅವರು ವಿವಿಧ ಸಂಘಗಳ ಯೋಜನೆಗಳನ್ನು ನೋಡಿ ಸಂತಸ ಪಟ್ಟರು.ವಿದ್ಯೆಯ ಮಹತ್ವ,ಇಂದಿನ ದಿನಗಳಲ್ಲಿ ಶಿಕ್ಷಣ ಅಂದರೆ ಏನು? ಸ್ಪರ್ಧಾ ಜಗತ್ತಿನಲ್ಲಿ ವಿದ್ಯಾರ್ಥಿಗಳ ಜೀವನದಲ್ಲಿ ಸಂಘಗಳ ಮಹತ್ವ,ಅದನ್ನು ಉಪಯೋಗಿಸಿ ಕೊಳ್ಳುವ ರೀತಿ ಇತ್ಯಾದಿಗಳನ್ನು ಕಥೆ ಕಗ್ಗಗಳ ಮೂಲಕ ಮಾರ್ಮಿಕವಾಗಿ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುಮಾರಿ ಕ್ಷಮಾ ನಿರ್ವಹಿಸಿ, ಧನ್ಯ ಶ್ರೀ ಸ್ವಾಗತಿಸಿ, ನಿವೇದ್ಯ ಧನ್ಯವಾದ ಇತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.

Related posts

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!