September 6, 2026
ತಾಲೂಕು ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದೆ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ

ಉಜಿರೆ : ಮೊದಲಿಗೆ ನಾವು ಮಾಡುವ ಕೆಲಸದಲ್ಲಿ ಶೃದ್ದೆ ಇರಬೇಕು. ಬರುವ ಗ್ರಾಹಕರನ್ನು ಗೌರವದಿಂದ ಮತ್ತು ಪ್ರೀತಿಯಿಂದ ನೋಡಿಕೊಂಡಾಗ ಅದೇ ದೊಡ್ಡ ಪ್ರಚಾರಕ್ಕೆ ಕಾರಣವಾಗುತ್ತದೆ. ಗ್ರಾಹಕರ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಮಾಡಿಕೊಡುವ ಜಾಣ್ಮೆಯನ್ನು ನಾವು ಬೆಳೆಸಿಕೊಳ್ಳಬೇಕು. ವೃತ್ತಿ ಜೀವನದಲ್ಲಿ ಸಾಧನೆ ಮಾಡಲು ಪ್ರಯತ್ನ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ರುಡ್‌ ಸೆಟ್‌ ಸಂಸ್ಥೆಯಲ್ಲಿ ಅತ್ಯತ್ತುಮವಾದ ತರಬೇತಿಯನ್ನು ಪಡೆದುಕೊಂಡಿದ್ದೀರಿ ಅದನ್ನು ಜೀವನದಲ್ಲಿ ಮತ್ತು ಉದ್ಯಮದಲ್ಲಿ ಉಪಯೋಗಿಸಿಕೊಂಡು ಯಶಸ್ವಿಯಾಗಿ ಎಂದು ಉಜಿರೆಯ ಲಕ್ಷ್ಮೀ ಗ್ರೂಪ್ಸ್ ಮತ್ತು ಕನಸಿನ ಮನೆಯ ಮಾಲಕರಾದ ಶ್ರೀಮೋಹನ್ ಕುಮಾರ್ ಅಭಿಪ್ರಾಯಪಟ್ಟರು

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 13 ದಿನಗಳ ಕಾಲ ನಡೆದೆ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ಮತ್ತು ತರಬೇತಿ ಕಿಟ್ ನೀಡಿ ಮಾತನಾಡಿದರು. ಸ್ವ ಉದ್ಯೋಗ ನಮ್ಮ ಹೆಮ್ಮೆಯ ವೃತ್ತಿ ಯಾಗಬೇಕು. ಗ್ರಾಹಕರನ್ನು ದೇವರಂತೆ ಕಾಣಬೇಕು ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಇನ್ನೋರ್ವ ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕಿನ ನಿವೃತ್ತ ಉಪಮಹಾಪ್ರಬಂಧಕರಾದ ಶ್ರೀ ಉದಯ ಕುಮಾರ್ ಮಾತನಾಡಿ ನಿಮ್ಮ ಸ್ವ ಉದ್ಯೋಗ ಮತ್ತು ಉದ್ಯೋಗಕ್ಕೆ ಇರುವ ವ್ಯತ್ಯಾಸವನ್ನು ತಿಳಿದು ಸ್ವ ಉದ್ಯೋಗಕ್ಕೆ ಮನಸ್ಸು ಮಾಡಿರುವುದೇ ಒಂದು ಉತ್ತಮ ನಿರ್ಧಾರವಾಗಿದೆ. ನಿಮ್ಮ ವೃತ್ತಿಯಲ್ಲಿ ಶ್ರಮ ಮತ್ತು ನಿಷ್ಠೆ ಇದ್ದರೆ ಯಶಸ್ಸು ಖಂಡಿತ ಎಂದು ಶುಭಹಾರೈಸಿ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡಿದರು ಒಂದು ನಿಗಧಿತ ಸಮಯದ ಒಳಗೆ ಉದ್ದೇಶಿಸಿದ ಗುರಿಯನ್ನು ತಲುಪಲು ಸತತವಾದ ಹೊಸ ಹೊಸ ಅವಿಷ್ಕಾರಗಳ ಜೊತೆಗೆ ವ್ಯವಹಾರವನ್ನು ಉತ್ತಮ ರೀತಿಯಲ್ಲಿ ಬೆಳೆಸಿ. ಆರ್ಥೀಕ ನೆರವಿಗಾಗಿ ನಿಮ್ಮ ಸಮೀಪ ಕೆನರಾ ಬ್ಯಾಂಕ್ ಅನ್ನು ಸಂಪರ್ಕಿಸಿ, ಜೊತೆಗೆ ಡಿಜಿಟಲ್ ಮಾಧ್ಯಮಾ ಮೂಲಕ ಬ್ಯಾಂಕ್ ವ್ಯವಹಾರ ನಡೆಸಿ ಎಂದು ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಕೌಶಲ್ಯ ತರಬೇತಿಯನ್ನು ನೀಡಿದ ಅತಿಥಿ ಉಪನ್ಯಾಸಕರಾದ ಶ್ರೀ ಗುರುರಾಜ್ ಉಪಸ್ಥಿತರಿದ್ದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಶ್ರೀ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ಕಾರ್ಯಕ್ರಮ ನಿರೂಪಿಸಿದರು ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ವಂದಿಸಿದರು. ಸುಮಾರು 35 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು ಅಭಯ ಮತ್ತು ಬಳಗ ಪ್ರಾರ್ಥನೆ ಮಾಡಿದರು, ದರ್ಶನ ಮತ್ತು ತ್ರಿಶೋನ್ ತರಬೇತಿಯ ಅನುಭವ ಹಂಚಿಕೊಂಡರು.

Related posts

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Suddi Udaya

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!