37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸದಿರುವ ಕುರಿತು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನೋಂದಣಿಗೊಳಿಸುವಂತೆ ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರ್, ಹಾಗೂ ಪೊಲೀಸ್ ಠಾಣೆಗೆ ಮನವಿ

ಬೆಳ್ತಂಗಡಿ : ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸದಿರುವ ಕುರಿತು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನೋಂದಣಿಗೊಳಿಸುವಂತೆ ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದಿಂದ ಬೆಳ್ತಂಗಡಿ ತಹಶೀಲ್ದಾರ್, ಹಾಗೂ ಪೋಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.

ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿಗಳಿಗೆ ಕೆಂಪುಕಲ್ಲು ಮತ್ತು ಮರಳಿನ ಅಭಾವದಿಂದ ಕಾರ್ಮಿಕರಿಗೆ ಕೆಲಸವು ಲಭಿಸುತ್ತಿಲ್ಲ ಸಾಮಗ್ರಿಗಳ ಪೂರೈಕೆ ಮತ್ತು ಸಾಗಾಟದ ವಿಷಯದಲ್ಲಿ ಅಧಿಕಾರಿಗಳು ಜಿಲ್ಲೆಗೆ ಅನೇಕ ಹೊಸ ನೀತಿ ನಿಯಮಗಳನ್ನು ಜಾರಿ ಮಾಡಿ ಇದರಿಂದ ಕಟ್ಟಡ ನಿರ್ಮಾಣಕ್ಕಾಗಿ ಬೇಕಾಗುವ ಸಾಮಗ್ರಿಗಳು ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ. ಕಾರ್ಮಿಕರು ವಿವಿಧ ರೀತಿಯ ಸಾಲಗಳನ್ನು ಮಾಡಿಕೊಂಡು ಅದಕ್ಕೆ ಕಂತುಗಳನ್ನು ಕಟ್ಟುವ ಜವಾಬ್ದಾರಿಯನ್ನು ಹೊಂದಿರುವುದು ಇದರಿಂದ ಕಾರ್ಮಿಕರು ಭಾರಿ ರೀತಿಯ ತೊಂದರೆಗಳಿಗೆ ಒಳಗಾಗುತ್ತಿದ್ದಾರೆ. ಅಲ್ಲದೆ ಇದು ಶಾಲಾ ಆರಂಭದ ದಿನಗಳಾಗಿದ್ದರಿಂದ ಕಾರ್ಮಿಕರ ಮಕ್ಕಳ ಶಾಲಾ ಶೈಕ್ಷಣಿಕ ಖರ್ಚಿಗಾಗಿ ಹೆಚ್ಚಿನ ರೀತಿಯ ಹಣವು ಕಾರ್ಮಿಕರಿಗೆ ಅವಶ್ಯಕತೆ ಇರುವುದರಿಂದ ಈ ಸಂದರ್ಭ ಕಾರ್ಮಿಕರ ಜೀವನಕ್ಕೆ ನಿರ್ಧಾರಗಳಿಂದ ಬಾರಿ ಪ್ರಮಾಣದ ತೊಂದರೆಗಳಾಗಿದೆ ಈ ಬಗ್ಗೆ ಸೂಕ್ತವಾದ ಕ್ರಮವನ್ನು ಕೈಗೊಳ್ಳುವಂತೆ ಕೋರಿಕೆ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ಹೊರರಾಜ್ಯದ ಕಾರ್ಮಿಕರು ತಾಲೂಕಿನ ಅತ್ಯಂತ ಕೆಲಸವನ್ನು ನಿರ್ವಹಿಸುತ್ತಿದ್ದು ನಮ್ಮ ತಾಲೂಕಿನಲ್ಲಿ ಕೆಲಸ ನಿರ್ವಹಿಸುವ ಹೊರರಾಜ್ಯದ ಕಾರ್ಮಿಕರ ನೋಂದಣಿಯನ್ನು ಮಾಡಿಕೊಳ್ಳಲುವಂತೆ ಮನವಿ ಮೂಲಕ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಭಾರತೀಯ ಮಜ್ದೂರು ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಯು, ಬಿಎಂಎಸ್ ಪ್ರಧಾನ ರಾಜ್ಯ ಕಾರ್ಯದರ್ಶಿ ಜಯರಾಜ್, ಬಿ,ಬಿಎಂ.ಎಸ್ ತಾಲೂಕು ಅಧ್ಯಕ್ಷ ಉದಯ ಬಿ.ಕೆ ಬಂದಾರು, ಪ್ರಮುಖರಾದ ಉದಯ್ ಕುಮಾರ್ ಉಜಿರೆ, ಗಣೇಶ್ ಪೆರಾಡಿ, ಜಿಲ್ಲಾ ಸಂಘಟನ ಕಾರ್ಯದರ್ಶಿ ಕುಮಾರ್ ನಾಥ್ ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ಪೆರಿಯಡ್ಕ ಶಾಲೆಗೆ ಮಂಗಳೂರು ಶಿಕ್ಷಾ ಸಾಥಿ ತಂಡದಿಂದ ಫ್ಯಾನ್ ಕೊಡುಗೆ

Suddi Udaya
error: Content is protected !!