25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸದಿರುವ ಕುರಿತು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನೋಂದಣಿಗೊಳಿಸುವಂತೆ ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರ್, ಹಾಗೂ ಪೊಲೀಸ್ ಠಾಣೆಗೆ ಮನವಿ

ಬೆಳ್ತಂಗಡಿ : ಕಟ್ಟಡ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದಿಂದ ಕಾರ್ಮಿಕರಿಗೆ ಕೆಲಸ ಲಭಿಸದಿರುವ ಕುರಿತು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನೋಂದಣಿಗೊಳಿಸುವಂತೆ ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದಿಂದ ಬೆಳ್ತಂಗಡಿ ತಹಶೀಲ್ದಾರ್, ಹಾಗೂ ಪೋಲೀಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.

ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿಗಳಿಗೆ ಕೆಂಪುಕಲ್ಲು ಮತ್ತು ಮರಳಿನ ಅಭಾವದಿಂದ ಕಾರ್ಮಿಕರಿಗೆ ಕೆಲಸವು ಲಭಿಸುತ್ತಿಲ್ಲ ಸಾಮಗ್ರಿಗಳ ಪೂರೈಕೆ ಮತ್ತು ಸಾಗಾಟದ ವಿಷಯದಲ್ಲಿ ಅಧಿಕಾರಿಗಳು ಜಿಲ್ಲೆಗೆ ಅನೇಕ ಹೊಸ ನೀತಿ ನಿಯಮಗಳನ್ನು ಜಾರಿ ಮಾಡಿ ಇದರಿಂದ ಕಟ್ಟಡ ನಿರ್ಮಾಣಕ್ಕಾಗಿ ಬೇಕಾಗುವ ಸಾಮಗ್ರಿಗಳು ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ. ಕಾರ್ಮಿಕರು ವಿವಿಧ ರೀತಿಯ ಸಾಲಗಳನ್ನು ಮಾಡಿಕೊಂಡು ಅದಕ್ಕೆ ಕಂತುಗಳನ್ನು ಕಟ್ಟುವ ಜವಾಬ್ದಾರಿಯನ್ನು ಹೊಂದಿರುವುದು ಇದರಿಂದ ಕಾರ್ಮಿಕರು ಭಾರಿ ರೀತಿಯ ತೊಂದರೆಗಳಿಗೆ ಒಳಗಾಗುತ್ತಿದ್ದಾರೆ. ಅಲ್ಲದೆ ಇದು ಶಾಲಾ ಆರಂಭದ ದಿನಗಳಾಗಿದ್ದರಿಂದ ಕಾರ್ಮಿಕರ ಮಕ್ಕಳ ಶಾಲಾ ಶೈಕ್ಷಣಿಕ ಖರ್ಚಿಗಾಗಿ ಹೆಚ್ಚಿನ ರೀತಿಯ ಹಣವು ಕಾರ್ಮಿಕರಿಗೆ ಅವಶ್ಯಕತೆ ಇರುವುದರಿಂದ ಈ ಸಂದರ್ಭ ಕಾರ್ಮಿಕರ ಜೀವನಕ್ಕೆ ನಿರ್ಧಾರಗಳಿಂದ ಬಾರಿ ಪ್ರಮಾಣದ ತೊಂದರೆಗಳಾಗಿದೆ ಈ ಬಗ್ಗೆ ಸೂಕ್ತವಾದ ಕ್ರಮವನ್ನು ಕೈಗೊಳ್ಳುವಂತೆ ಕೋರಿಕೆ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ಹೊರರಾಜ್ಯದ ಕಾರ್ಮಿಕರು ತಾಲೂಕಿನ ಅತ್ಯಂತ ಕೆಲಸವನ್ನು ನಿರ್ವಹಿಸುತ್ತಿದ್ದು ನಮ್ಮ ತಾಲೂಕಿನಲ್ಲಿ ಕೆಲಸ ನಿರ್ವಹಿಸುವ ಹೊರರಾಜ್ಯದ ಕಾರ್ಮಿಕರ ನೋಂದಣಿಯನ್ನು ಮಾಡಿಕೊಳ್ಳಲುವಂತೆ ಮನವಿ ಮೂಲಕ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಭಾರತೀಯ ಮಜ್ದೂರು ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಯು, ಬಿಎಂಎಸ್ ಪ್ರಧಾನ ರಾಜ್ಯ ಕಾರ್ಯದರ್ಶಿ ಜಯರಾಜ್, ಬಿ,ಬಿಎಂ.ಎಸ್ ತಾಲೂಕು ಅಧ್ಯಕ್ಷ ಉದಯ ಬಿ.ಕೆ ಬಂದಾರು, ಪ್ರಮುಖರಾದ ಉದಯ್ ಕುಮಾರ್ ಉಜಿರೆ, ಗಣೇಶ್ ಪೆರಾಡಿ, ಜಿಲ್ಲಾ ಸಂಘಟನ ಕಾರ್ಯದರ್ಶಿ ಕುಮಾರ್ ನಾಥ್ ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Related posts

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!