ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಕಲ್ಮಂಜ: ಇಲ್ಲಿಯ ಶ್ರೀ ಸತ್ಯನಾರಾಯಣ ಮಕ್ಕಳ ಯಕ್ಷಗಾನ ತರಬೇತಿ ಕೇಂದ್ರದ ಮೂವತ್ತು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಜೂ.28ರಂದು ಕಲ್ಮಂಜ ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಲ್ಲಿ ಜರುಗಿತು.

ಯಕ್ಷಗಾನ ತರಬೇತಿ ಕೇಂದ್ರದ ಸಂಚಾಲಕ ಶೇಖರ್ ಟಿ. ಸಮವಸ್ತ್ರ ವಿತರಿಸಿ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಯಕ್ಷಗಾನ ಕಲಿಕೆಯು ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಪ್ರಜ್ಞೆ ಪುರಾಣೇತಿಹಾಸದ ತಿಳುವಳಿಕೆ, ಕಲಾಸಕ್ತಿ, ನೃತ್ಯ-ನಟನಾ ಕೌಶಲ, ವಾಕ್ಚಾತುರ್ಯ, ರಂಗಾಭಿನಯ ಪಾಂಡಿತ್ಯ, ಸಂಸ್ಕೃತಿ-ಸಂಸ್ಕಾರದ ಅರಿವು, ಸ್ವಯಂಶಿಸ್ತು, ಮನೋಸ್ಥೆರ್ಯ, ಜೊತೆಗೆ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಹಾಗೂ ಪರಿಪಕ್ವ ಬೆಳವಣಿಗೆಗೆ ಪೂರಕವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯಕ್ಷಗಾನ ಗುರುಗಳಾದ ಅರುಣ್ ಕುಮಾರ್ ಧರ್ಮಸ್ಥಳ, ಕೆ. ನಾಗೇಶ್ ಆಚಾರ್ಯ, ಕೃಷ್ಣಪ್ಪ ಟೈಲರ್ ನಿಡಿಗಲ್ ಮಜಲ್, ಚಿದಾನಂದ ಅಕ್ಷಯ ನಗರ, ಮಣಿಲಾ ಮುಖೇಶ್, ವಸಂತ ಟೈಲರ್ ನಿಡಿಗಲ್ ಮಜಲ್ ಹಾಗೂ ಪೋಷಕರು ಉಪಸ್ಥಿತರಿದ್ದರು.

ಕಳೆದ ಮೂರು ವರ್ಷಗಳ ಹಿಂದೆ ಶೇಖರ್ ಟಿ. ರವರ ನೇತೃತ್ವದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿಯು ಉಚಿತವಾಗಿದ್ದು ಪ್ರತೀ ಆದಿತ್ಯವಾರ ಬೆಳಿಗ್ಗೆ 8:30ರಿಂದ 10ರ ತನಕ ನಡೆಯುತ್ತದೆ.

Related posts

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya
error: Content is protected !!