25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಕಲ್ಮಂಜ: ಇಲ್ಲಿಯ ಶ್ರೀ ಸತ್ಯನಾರಾಯಣ ಮಕ್ಕಳ ಯಕ್ಷಗಾನ ತರಬೇತಿ ಕೇಂದ್ರದ ಮೂವತ್ತು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಜೂ.28ರಂದು ಕಲ್ಮಂಜ ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಲ್ಲಿ ಜರುಗಿತು.

ಯಕ್ಷಗಾನ ತರಬೇತಿ ಕೇಂದ್ರದ ಸಂಚಾಲಕ ಶೇಖರ್ ಟಿ. ಸಮವಸ್ತ್ರ ವಿತರಿಸಿ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಯಕ್ಷಗಾನ ಕಲಿಕೆಯು ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಪ್ರಜ್ಞೆ ಪುರಾಣೇತಿಹಾಸದ ತಿಳುವಳಿಕೆ, ಕಲಾಸಕ್ತಿ, ನೃತ್ಯ-ನಟನಾ ಕೌಶಲ, ವಾಕ್ಚಾತುರ್ಯ, ರಂಗಾಭಿನಯ ಪಾಂಡಿತ್ಯ, ಸಂಸ್ಕೃತಿ-ಸಂಸ್ಕಾರದ ಅರಿವು, ಸ್ವಯಂಶಿಸ್ತು, ಮನೋಸ್ಥೆರ್ಯ, ಜೊತೆಗೆ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಹಾಗೂ ಪರಿಪಕ್ವ ಬೆಳವಣಿಗೆಗೆ ಪೂರಕವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯಕ್ಷಗಾನ ಗುರುಗಳಾದ ಅರುಣ್ ಕುಮಾರ್ ಧರ್ಮಸ್ಥಳ, ಕೆ. ನಾಗೇಶ್ ಆಚಾರ್ಯ, ಕೃಷ್ಣಪ್ಪ ಟೈಲರ್ ನಿಡಿಗಲ್ ಮಜಲ್, ಚಿದಾನಂದ ಅಕ್ಷಯ ನಗರ, ಮಣಿಲಾ ಮುಖೇಶ್, ವಸಂತ ಟೈಲರ್ ನಿಡಿಗಲ್ ಮಜಲ್ ಹಾಗೂ ಪೋಷಕರು ಉಪಸ್ಥಿತರಿದ್ದರು.

ಕಳೆದ ಮೂರು ವರ್ಷಗಳ ಹಿಂದೆ ಶೇಖರ್ ಟಿ. ರವರ ನೇತೃತ್ವದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿಯು ಉಚಿತವಾಗಿದ್ದು ಪ್ರತೀ ಆದಿತ್ಯವಾರ ಬೆಳಿಗ್ಗೆ 8:30ರಿಂದ 10ರ ತನಕ ನಡೆಯುತ್ತದೆ.

Related posts

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!